ಲೋಕೋಪಯೋಗಿ, ಜಲ ಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ನಡುವೆ ಎಂಜಿನಿಯರ್ಗಳ ಹಂಚಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ನಡುವೆಯೇ ಯಾವುದೇ ಪೂರ್ವಭಾವಿ ಮಾಹಿತಿ ನೀಡದೆ 118 ಎಇಇಗಳ ಸೇವೆಯನ್ನು ಲೋಕೋಪಯೋಗಿ ಇಲಾಖೆಗೆ ಹಿಂದಿರುಗಿಸಿ ಮೇ 27ರಂದು ಆದೇಶ ಹೊರಡಿಸಿರುವ ಜಲ ಸಂಪನ್ಮೂಲ ಇಲಾಖೆಯ ನಿಲುವನ್ನು ಗೋವಿಂದ ಕಾರಜೋಳ ಆಕ್ಷೇಪಿಸಿದ್ದಾರೆ.