ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಪ್ರತಿಭಟನಾ ನಿರತ ನೌಕರರ ಜತೆ ಚರ್ಚೆ, ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ. ನಾನು ರಾತ್ರಿ 12 ಗಂಟೆವರೆಗೂ ಕಾಯಲು ಸಿದ್ಧ. ಹೀಗಾಗಿ ಮೊದಲು ಕೆಲಸಕ್ಕೆ ಹಾಜರಾಗಿ ಮಾತುಕತೆಗೆ ಬನ್ನಿ. ನೌಕರರ ಸಮಸ್ಯೆ ಹಾಗೂ ಅಹವಾಲುಗಳನ್ನು ಸಹಾನುಭೂತಿಯಿಂದ ಪರಿಗಣಿಸಲು ಸರ್ಕಾರ ಸಿದ್ದವಿದೆ’ ಎಂದು ಮುಷ್ಕರನಿರತರನ್ನು ಉದ್ದೇಶಿಸಿ ಸವದಿ ಹೇಳಿದರು.