ಅಶ್ವತ್ಥನಾರಾಯಣ ಅವರು ಸ್ವತಃ ವೈದ್ಯರು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮಕ್ಕಳು ಅವರ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಶಿಕ್ಷಣದ ಮಹತ್ವ ಹಾಗೂ ಅದರಿಂದ ಉಂಟಾಗುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಅವರಿಗೆ ಅತ್ಯುತ್ತಮ ಜ್ಞಾನವಿದೆ ಎಂದ ಅವರು, ‘ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುತ್ತೀರಿ. ಹಿಂದೊಮ್ಮೆ ನಾನು ಸದನದಲ್ಲೂ ಇದೇ ಮಾತು ಹೇಳಿದ್ದೆ' ಎಂದು ನುಡಿದರು.