‘ಸರ್ಕಾರಿ ಪದವಿ, ಸ್ನಾತಕೋತ್ತರ, ಎಂಜನಿಯರಿಂಗ್, ಪಾಲಿಟೆಕ್ನಿಕ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳು. ಕೇಂದ್ರ ಆಡಳಿತ ಸೇವೆ, ಬ್ಯಾಂಕಿಂಗ್, ಗ್ರೂಪ್ ‘ಸಿ’ ಸೇರಿದಂತೆ ವಿವಿಧ ವಲಯಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳಿಗೆ ಪ್ರತಿವರ್ಷ ಕೇಂದ್ರ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡುತ್ತಿದೆ. ಆದರೆ, ಈ ಆಯ್ಕೆಯಲ್ಲಿ ಕನ್ನಡಿಗ ವಿದ್ಯಾರ್ಥಿಗಳು ಹಿಂದೆಬೀಳುತ್ತಿದ್ದಾರೆ. ಅದನ್ನು ಸರಿಪಡಿಸುವ ಉದ್ದೇಶದಿಂದ ಅನ್ ಅಕಾಡೆಮಿ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ’ ಎಂದೂ ಅವರು ವಿವರಿಸಿದರು.