1964ರಲ್ಲಿ ಧಾರವಾಡ ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕಿಯಾಗಿ ಸೇರಿದರು. ಆನಂತರ ಕೋಲ್ಕತ್ತ, ಜೈಪುರ, ಮುಂಬೈ, ಮೈಸೂರು ಮತ್ತು ಬೆಂಗಳೂರು ನಗರಗಳ ಆಕಾಶವಾಣಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ, ಕೊನೆಗೆ ಬೆಂಗಳೂರು ಆಕಾಶವಾಣಿಯಲ್ಲಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿ, 1994ರಲ್ಲಿ ನಿವೃತ್ತಿ ಹೊಂದಿದರು. ಅವರು ಆಕಾಶವಾಣಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಬಿತ್ತರಗೊಂಡ ‘ಗಾಂಧಿ-ಒಂದು ಪುನರ್ದರ್ಶನ’ ಮತ್ತು ‘ಹಿರಿಯರ ಯುಗಾದಿ ಮೇಳ’ ಕಾರ್ಯಕ್ರಮಗಳು ಪುಸ್ತಕ ರೂಪದಲ್ಲೂ ಪ್ರಕಟವಾಗಿವೆ.