ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ: ಸಂಜೆ ಅಂತಿಮ ವಿಧಿವಿಧಾನ

Last Updated 23 ಮಾರ್ಚ್ 2023, 5:31 IST
ಅಕ್ಷರ ಗಾತ್ರ

ಹಾಸನ: ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಠದ ಮೂಲಗಳು ತಿಳಿಸಿವೆ.

ಶ್ರವಣಬೆಳಗೊಳದ ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT