ಹಾಸನ: ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಠದ ಮೂಲಗಳು ತಿಳಿಸಿವೆ.