ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಕಲ್ಯಾಣ ಕರ್ನಾಟಕದ ಭಾಗದಲ್ಲಿ ಶೇ 40ರಷ್ಟು ಉಪನ್ಯಾಸಕರ ಕೊರತೆ ಇದೆ. ಇರುವ ಉಪನ್ಯಾಸಕರನ್ನು ಮೌಲ್ಯಮಾಪನಕ್ಕೆ, ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಯೂಟ್ಯೂಬ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾಗಿದೆ. ಹೊಸದಾಗಿ ನೇಮಕಗೊಂಡಿರುವವರಿಗೆ ನೇಮಕಾತಿ ಆದೇಶ ನೀಡಿದರೆ ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.