ಮುದ್ದೇಬಿಹಾಳ (ವಿಜಯಪುರ): ದನ ಮೇಯಿಸಲೆಂದು ಹೋಗಿದ್ದ ಶಾಂತಮ್ಮ ಭೀಮನಗೌಡ ನಾಗೋಡ (20) ಹಾಗೂ ಗುರುಸಂಗಮ್ಮ ಭೀಮಪ್ಪ ಮುದೂರ (8) ಎಂಬುವವರು ತಾಲ್ಲೂಕಿನ ಹುನಕುಂಟಿ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಬುಧವಾರ ಮುಳುಗಿ ಸಾವನ್ನಪ್ಪಿದ್ದಾರೆ.
ದನಗಳಿಗೆ ನೀರು ಕುಡಿಸುವ ವೇಳೆ ಹೊಳೆಯಲ್ಲಿಯೇ ಇದ್ದ ಆಳವಾದ ಕಂದಕಕ್ಕೆ ಮೊದಲು ಗುರುಸಂಗಮ್ಮ ಬಿದ್ದಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಶಾಂತಮ್ಮ ಸಹ ಮುಳಗಿ ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
4 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ: ಆಲಮಟ್ಟಿ ಜಲಾಶಯದಿಂದ ಬುಧವಾರ 4 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗಿದ್ದು ಗುರುವಾರ ಈ ಪ್ರಮಾಣ ಇನ್ನಷ್ಟು ಹೆಚ್ಚಲಿದೆ.
ಈ ಬಗ್ಗೆ ಕೃಷ್ಣಾ ತೀರದ ಗ್ರಾಮಗಳಲ್ಲಿ ಡಂಗೂರ ಸಾರಲಾಗಿದ್ದು, ತೀವ್ರಕಟ್ಟೆಚ್ಚರದಿಂದ ಇರಲುಸೂಚಿಸಲಾಗಿದೆ. ಈಗಾಗಲೇ ತಾಲ್ಲೂಕಿನ ಕೃಷ್ಣಾ ತೀರದ 100 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಕಬ್ಬು, ಬಾಳೆ, ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಜಲಾವೃತಗೊಂಡಿವೆ.