<p><strong>ಬೆಂಗಳೂರು:</strong> ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಸೆ.21 ರಿಂದ ಸೆ.30 ರವರೆಗೆ ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಮುಂಗಾರು ಅಧಿವೇಶನವನ್ನು ಸೆಪ್ಟೆಂಬರ್ 23 ಕ್ಕೂ ಮೊದಲೇ ಆರಂಭಿಸಬೇಕಿತ್ತು. ಆದ್ದರಿಂದ ಸೆ.21 ರಿಂದ ಪ್ರಾರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲಾಗುವುದು. ಅಧಿವೇಶನದ ಸ್ಥಳ ಇತ್ಯಾದಿ ವಿಷಯಗಳ ಬಗ್ಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರ ಜತೆ ಮಾತುಕತೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.</p>.<p>ಅಗತ್ಯ ಎನಿಸಿದರೆ ಒಂದೆರಡು ದಿನಗಳು ಕಲಾಪ ವಿಸ್ತರಿಸಲಾಗುವುದು ಎಂದೂ ಮಾಧುಸ್ವಾಮಿ ತಿಳಿಸಿದರು. ಮಾರ್ಚ್ನಲ್ಲಿ ಅಧಿವೇಶನ ನಡೆಸುವಾಗ ಕೊರೊನಾ ಸೋಂಕು ವ್ಯಾಪಕಗೊಂಡ ಕಾರಣ, ಅಧಿವೇಶನವನ್ನು ಮೊಟಕುಗೊಳಿಸಲಾಗಿತ್ತು.</p>.<p>ಕೆಲವು ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಿಧಾನಸಭೆ ಸಭಾಂಗಣದಲ್ಲಿ ಅಧಿವೇಶನ ನಡೆಸಲು ಅಧಿಕಾರಿಗಳು ಸಭಾಧ್ಯಕ್ಷ ಕಾಗೇರಿಯವರಿಗೆ ಸಲಹೆ ನೀಡಿದ್ದು, ಅದರಂತೆ ಅಧಿವೇಶನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಪ್ರಮುಖ ನಿರ್ಣಯಗಳು</strong></p>.<p>* ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮ ಶಾಲೆಗಳ ವಿದ್ಯಾರ್ಥಿಗಳಿಗೆ ಊಟೋಪಚಾರ ಸೌಲಭ್ಯ, ಶುಚಿ ಸಂಭ್ರಮ ಕಿಟ್ ಹಾಗೂ ಶೂ ಮತ್ತು ಸಾಕ್ಸ್ ಒದಗಿಸಲು ₹65.48 ಕೋಟಿಗೆ ಅನುಮೋದನೆ</p>.<p>* ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ಮಾರ್ಗಸೂಚಿ ಪರಿಷ್ಕರಿಸಲು ಒಪ್ಪಿಗೆ</p>.<p>* ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಷೇರು ಬಂಡವಾಳವನ್ನು ₹1,000 ಕೋಟಿಯಿಂದ ₹1,250 ಕೋಟಿಗೆ ಹೆಚ್ಚಿಸಲು ಸಮ್ಮತಿ</p>.<p>* ಎಸ್ಸಿಪಿ ಟಿಎಸ್ಪಿ ಕಾರ್ಯಕ್ರಮದಡಿ 14 ಸಂಚಾರಿ ಆರೋಗ್ಯ ಘಟಕಗಳು ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ 64 ಸಂಚಾರಿ ಆರೋಗ್ಯ ಘಟಕಗಳು ಸೇರಿ ಒಟ್ಟು 78 ಸಂಚಾರಿ ಆರೋಗ್ಯ ಘಟಕಗಳನ್ನು 5 ವರ್ಷಗಳ ಅವಧಿಗೆ ಮುಂದುವರೆಸಲು ಅರ್ಹ ಸೇವಾದಾರರ ಆಯ್ಕೆಗೆ ಟೆಂಡರ್ ಕರೆಯಲು ಒಪ್ಪಿಗೆ</p>.<p>* ಕರ್ನಾಟಕ ಕಲ್ಲು ಪುಡಿ ಮಾಡುವ ಘಟಕಗಳ (ಕ್ರಷರ್ಸ್) ನಿಯಂತ್ರಣ ತಿದ್ದುಪಡಿ ಮಸೂದೆ 2020 ಕ್ಕೆ ಅನುಮೋದನೆ</p>.<p>* ಕರ್ನಾಟಕ ಕೈಗಾರಿಕಾ ಸೌಲಭ್ಯ ತಿದ್ದುಪಡಿ, ಮಸೂದೆ 2020 ಕ್ಕೆ ಅನುಮತಿ</p>.<p>* ಎಲ್ಲ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ಮತ್ತು ಸೌಹಾರ್ದ ಸಹಕಾರಿಗಳ ಚುನಾವಣೆಯನ್ನು ಡಿಸೆಂಬರ್ವರೆಗೆ ಮುಂದೂಡಿ, ಆಡಳಿತಾಧಿಕಾರಿಗಳನ್ನು ನೇಮಿಸಲು ಹೊರಡಿಸಿರುವ ಆದೇಶಗಳಿಗೆ ಅನುಮೋದನೆ</p>.<p>* ರಾಜ್ಯಾದ್ಯಂತ ಸರ್ಕಾರಿ ಮಾಲಿಕತ್ವದಲ್ಲಿ ಇರುವ ಘೋಷಿತ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಅನುಮತಿ</p>.<p>* ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 50 ಕೆರೆಗಳನ್ನು ತುಂಬಿಸಲು ₹265.20 ಕೋಟಿ ನೀಡಲು ಅನುಮೋದನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಸೆ.21 ರಿಂದ ಸೆ.30 ರವರೆಗೆ ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಮುಂಗಾರು ಅಧಿವೇಶನವನ್ನು ಸೆಪ್ಟೆಂಬರ್ 23 ಕ್ಕೂ ಮೊದಲೇ ಆರಂಭಿಸಬೇಕಿತ್ತು. ಆದ್ದರಿಂದ ಸೆ.21 ರಿಂದ ಪ್ರಾರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲಾಗುವುದು. ಅಧಿವೇಶನದ ಸ್ಥಳ ಇತ್ಯಾದಿ ವಿಷಯಗಳ ಬಗ್ಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರ ಜತೆ ಮಾತುಕತೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.</p>.<p>ಅಗತ್ಯ ಎನಿಸಿದರೆ ಒಂದೆರಡು ದಿನಗಳು ಕಲಾಪ ವಿಸ್ತರಿಸಲಾಗುವುದು ಎಂದೂ ಮಾಧುಸ್ವಾಮಿ ತಿಳಿಸಿದರು. ಮಾರ್ಚ್ನಲ್ಲಿ ಅಧಿವೇಶನ ನಡೆಸುವಾಗ ಕೊರೊನಾ ಸೋಂಕು ವ್ಯಾಪಕಗೊಂಡ ಕಾರಣ, ಅಧಿವೇಶನವನ್ನು ಮೊಟಕುಗೊಳಿಸಲಾಗಿತ್ತು.</p>.<p>ಕೆಲವು ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಿಧಾನಸಭೆ ಸಭಾಂಗಣದಲ್ಲಿ ಅಧಿವೇಶನ ನಡೆಸಲು ಅಧಿಕಾರಿಗಳು ಸಭಾಧ್ಯಕ್ಷ ಕಾಗೇರಿಯವರಿಗೆ ಸಲಹೆ ನೀಡಿದ್ದು, ಅದರಂತೆ ಅಧಿವೇಶನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಪ್ರಮುಖ ನಿರ್ಣಯಗಳು</strong></p>.<p>* ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮ ಶಾಲೆಗಳ ವಿದ್ಯಾರ್ಥಿಗಳಿಗೆ ಊಟೋಪಚಾರ ಸೌಲಭ್ಯ, ಶುಚಿ ಸಂಭ್ರಮ ಕಿಟ್ ಹಾಗೂ ಶೂ ಮತ್ತು ಸಾಕ್ಸ್ ಒದಗಿಸಲು ₹65.48 ಕೋಟಿಗೆ ಅನುಮೋದನೆ</p>.<p>* ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ಮಾರ್ಗಸೂಚಿ ಪರಿಷ್ಕರಿಸಲು ಒಪ್ಪಿಗೆ</p>.<p>* ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಷೇರು ಬಂಡವಾಳವನ್ನು ₹1,000 ಕೋಟಿಯಿಂದ ₹1,250 ಕೋಟಿಗೆ ಹೆಚ್ಚಿಸಲು ಸಮ್ಮತಿ</p>.<p>* ಎಸ್ಸಿಪಿ ಟಿಎಸ್ಪಿ ಕಾರ್ಯಕ್ರಮದಡಿ 14 ಸಂಚಾರಿ ಆರೋಗ್ಯ ಘಟಕಗಳು ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ 64 ಸಂಚಾರಿ ಆರೋಗ್ಯ ಘಟಕಗಳು ಸೇರಿ ಒಟ್ಟು 78 ಸಂಚಾರಿ ಆರೋಗ್ಯ ಘಟಕಗಳನ್ನು 5 ವರ್ಷಗಳ ಅವಧಿಗೆ ಮುಂದುವರೆಸಲು ಅರ್ಹ ಸೇವಾದಾರರ ಆಯ್ಕೆಗೆ ಟೆಂಡರ್ ಕರೆಯಲು ಒಪ್ಪಿಗೆ</p>.<p>* ಕರ್ನಾಟಕ ಕಲ್ಲು ಪುಡಿ ಮಾಡುವ ಘಟಕಗಳ (ಕ್ರಷರ್ಸ್) ನಿಯಂತ್ರಣ ತಿದ್ದುಪಡಿ ಮಸೂದೆ 2020 ಕ್ಕೆ ಅನುಮೋದನೆ</p>.<p>* ಕರ್ನಾಟಕ ಕೈಗಾರಿಕಾ ಸೌಲಭ್ಯ ತಿದ್ದುಪಡಿ, ಮಸೂದೆ 2020 ಕ್ಕೆ ಅನುಮತಿ</p>.<p>* ಎಲ್ಲ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ಮತ್ತು ಸೌಹಾರ್ದ ಸಹಕಾರಿಗಳ ಚುನಾವಣೆಯನ್ನು ಡಿಸೆಂಬರ್ವರೆಗೆ ಮುಂದೂಡಿ, ಆಡಳಿತಾಧಿಕಾರಿಗಳನ್ನು ನೇಮಿಸಲು ಹೊರಡಿಸಿರುವ ಆದೇಶಗಳಿಗೆ ಅನುಮೋದನೆ</p>.<p>* ರಾಜ್ಯಾದ್ಯಂತ ಸರ್ಕಾರಿ ಮಾಲಿಕತ್ವದಲ್ಲಿ ಇರುವ ಘೋಷಿತ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಅನುಮತಿ</p>.<p>* ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 50 ಕೆರೆಗಳನ್ನು ತುಂಬಿಸಲು ₹265.20 ಕೋಟಿ ನೀಡಲು ಅನುಮೋದನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>