‘ಮುಷ್ಕರ ನಡೆಸಿದ್ದಕ್ಕೆ ಸೇಡಿನ ಕ್ರಮವಾಗಿ ಬಿಎಂಟಿಸಿಯಲ್ಲೇ 1,200 ತರಬೇತಿ ಅವಧಿಯ ಸಿಬ್ಬಂದಿ ಸೇರಿ 2 ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾಗೊಳಿಸಲಾಗಿದೆ. 5 ತಿಂಗಳು ಕಳೆದರೂ ಸೇವೆಯಿಂದ ವಜಾ ಆದವರನ್ನು ಪುನರ್ ನೇಮಕ ಮಾಡಿಲ್ಲ. ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸಾರಿಗೆ ಸಚಿವರು ನೀಡಿದ ಭರವಸೆ ಇನ್ನೂ ಈಡೇರಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.