<p><strong>ಬೆಂಗಳೂರು</strong>: ಸೇವೆಯಿಂದ ವಜಾ ಮಾಡಿರುವ ಸಾರಿಗೆ ಸಂಸ್ಥೆಗಳ ನೌಕರರ ಪುನರ್ ನೇಮಕಕ್ಕೆ ಒತ್ತಾಯಿಸಿ ಅ.27ರಿಂದ ಅನಿರ್ದಿಷ್ಟ ಧರಣಿ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ನ(ಸಿಐಟಿಯು ಸಂಯೋಜಿತ) ನಿರ್ಧರಿಸಿದೆ.</p>.<p>‘ಸಾರಿಗೆ ಸಚಿವರು ನೀಡಿದ್ದ ಭರವಸೆ ಈಡೇರಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಬಿಎಂಟಿಸಿ ಕೇಂದ್ರ ಕಚೇರಿ ಬಳಿ ಧರಣಿ ಆರಂಭಿಸಲು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಫೆಡರೇಷನ್ ಅಧ್ಯಕ್ಷ ಎಚ್.ಡಿ. ರೇವಪ್ಪ ತಿಳಿಸಿದ್ದಾರೆ.</p>.<p>‘ಮುಷ್ಕರ ನಡೆಸಿದ್ದಕ್ಕೆ ಸೇಡಿನ ಕ್ರಮವಾಗಿ ಬಿಎಂಟಿಸಿಯಲ್ಲೇ 1,200 ತರಬೇತಿ ಅವಧಿಯ ಸಿಬ್ಬಂದಿ ಸೇರಿ 2 ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾಗೊಳಿಸಲಾಗಿದೆ. 5 ತಿಂಗಳು ಕಳೆದರೂ ಸೇವೆಯಿಂದ ವಜಾ ಆದವರನ್ನು ಪುನರ್ ನೇಮಕ ಮಾಡಿಲ್ಲ. ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸಾರಿಗೆ ಸಚಿವರು ನೀಡಿದ ಭರವಸೆ ಇನ್ನೂ ಈಡೇರಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ವರ್ಗಾವಣೆ ಮಾಡಿರುವ ಎಲ್ಲರನ್ನೂ ಅದೇ ಸ್ಥಾನಕ್ಕೆ ಮರಳಿ ನೇಮಿಸಬೇಕು. ಅಮಾನತು ಆದವರು ವಾಪಸ್ ಬರಲು ಅವಕಾಶ ನೀಡಬೇಕು. ಶಿಸ್ತು ಪ್ರಕಿಯೆಗಳನ್ನು ರದ್ದುಮಾಡಬೇಕು. ಮುಷ್ಕರದ ಅವಧಿಯನ್ನು ಗೈರು ಹಾಜರಿ ಎಂದು ಪರಿಗಣಿಸಿ ₹2 ಸಾವಿರದಿಂದ ₹10 ಸಾವಿರ ತನಕ ದಂಡ ವಿಧಿಸುವುದನ್ನು ನಿಲ್ಲಿಸಬೇಕು.ಅಧಿಕಾರಿಗಳ ದೌರ್ಜನ್ಯದ ಆಡಳಿತಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸೇವೆಯಿಂದ ವಜಾ ಮಾಡಿರುವ ಸಾರಿಗೆ ಸಂಸ್ಥೆಗಳ ನೌಕರರ ಪುನರ್ ನೇಮಕಕ್ಕೆ ಒತ್ತಾಯಿಸಿ ಅ.27ರಿಂದ ಅನಿರ್ದಿಷ್ಟ ಧರಣಿ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ನ(ಸಿಐಟಿಯು ಸಂಯೋಜಿತ) ನಿರ್ಧರಿಸಿದೆ.</p>.<p>‘ಸಾರಿಗೆ ಸಚಿವರು ನೀಡಿದ್ದ ಭರವಸೆ ಈಡೇರಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಬಿಎಂಟಿಸಿ ಕೇಂದ್ರ ಕಚೇರಿ ಬಳಿ ಧರಣಿ ಆರಂಭಿಸಲು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಫೆಡರೇಷನ್ ಅಧ್ಯಕ್ಷ ಎಚ್.ಡಿ. ರೇವಪ್ಪ ತಿಳಿಸಿದ್ದಾರೆ.</p>.<p>‘ಮುಷ್ಕರ ನಡೆಸಿದ್ದಕ್ಕೆ ಸೇಡಿನ ಕ್ರಮವಾಗಿ ಬಿಎಂಟಿಸಿಯಲ್ಲೇ 1,200 ತರಬೇತಿ ಅವಧಿಯ ಸಿಬ್ಬಂದಿ ಸೇರಿ 2 ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾಗೊಳಿಸಲಾಗಿದೆ. 5 ತಿಂಗಳು ಕಳೆದರೂ ಸೇವೆಯಿಂದ ವಜಾ ಆದವರನ್ನು ಪುನರ್ ನೇಮಕ ಮಾಡಿಲ್ಲ. ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸಾರಿಗೆ ಸಚಿವರು ನೀಡಿದ ಭರವಸೆ ಇನ್ನೂ ಈಡೇರಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ವರ್ಗಾವಣೆ ಮಾಡಿರುವ ಎಲ್ಲರನ್ನೂ ಅದೇ ಸ್ಥಾನಕ್ಕೆ ಮರಳಿ ನೇಮಿಸಬೇಕು. ಅಮಾನತು ಆದವರು ವಾಪಸ್ ಬರಲು ಅವಕಾಶ ನೀಡಬೇಕು. ಶಿಸ್ತು ಪ್ರಕಿಯೆಗಳನ್ನು ರದ್ದುಮಾಡಬೇಕು. ಮುಷ್ಕರದ ಅವಧಿಯನ್ನು ಗೈರು ಹಾಜರಿ ಎಂದು ಪರಿಗಣಿಸಿ ₹2 ಸಾವಿರದಿಂದ ₹10 ಸಾವಿರ ತನಕ ದಂಡ ವಿಧಿಸುವುದನ್ನು ನಿಲ್ಲಿಸಬೇಕು.ಅಧಿಕಾರಿಗಳ ದೌರ್ಜನ್ಯದ ಆಡಳಿತಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>