<p><strong>ಬೆಂಗಳೂರು:</strong> ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣೆಗಾಗಿ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಪ್ರತ್ಯೇಕ ಕ್ಷೇತ್ರ ಪುನರ್ವಿಂಗಡಣಾ ಆಯೋಗ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತ್ಯೇಕ ಆಯೋಗ ರಚನೆಗೆ ಪೂರಕವಾಗಿ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಸಭೆಯ ಬಳಿಕ ವಿವರ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, 'ಕಾನೂನಿನ ಪ್ರಕಾರ ರಾಜ್ಯ ಚುನಾವಣಾ ಆಯೋಗವೇ ಕ್ಷೇತ್ರ ಪುನರ್ವಿಂಗಡಣೆ ಮಾಡಲು ಅವಕಾಶವಿಲ್ಲ. ಕಳೆದ ಬಾರಿ ತಪ್ಪಾಗಿ ಆ ರೀತಿ ಪ್ರಕ್ರಿಯೆ ನಡೆಸಲಾಗಿದೆ. ಇದರಿಂದ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡೆಯಲ್ಲಿ ತಪ್ಪುಗಳಾಗಿವೆ ಎಂದು ಆರೋಪಿಸಿ ಹೈಕೋರ್ಟ್ಗೆ 2,000 ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಸಮಸ್ಯೆ ತಪ್ಪಿಸಲು ಪ್ರತ್ಯೇಕ ಆಯೋಗ ರಚನೆಗೆ ತೀರ್ಮಾನಿಸಲಾಯಿತು' ಎಂದರು.</p>.<p>ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಕ್ಷೇತ್ರ ಪುನರ್ವಿಂಗಡಣಾ ಆಯೋಗದಲ್ಲಿ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸದಸ್ಯರಾಗಲಿದ್ದು, ಆಯುಕ್ತರು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಅಗತ್ಯ ಇರುವ ಎಲ್ಲ ಸಂದರ್ಭಗಳಲ್ಲಿ ಸೀಮಿತ ಕಾಲಾವಧಿಗೆ ಆಯೋಗವನ್ನು ನೇಮಿಸಲಾಗುವುದು ಎಂದು ವಿವರಿಸಿದರು.</p>.<p>ಪ್ರತ್ಯೇಕ ಆಯೋಗ ಸಿದ್ಧಪಡಿಸುವ ಕ್ಷೇತ್ರ ಪುನರ್ವಿಂಗಡಣಾ ವರದಿಗಳಿಗೆ ಎರಡು ಹಂತಗಳಲ್ಲಿ ಸಲಹೆ, ಆಕ್ಷೇಪಣೆ ಸ್ವೀಕರಿಸಿ, ಇತ್ಯರ್ಥಪಡಿಸಲಾಗುವುದು. ಮೊದಲು ಜಿಲ್ಲಾಧಿಕಾರಿ ಹಂತದಲ್ಲಿ ಆಕ್ಷೇಪಣೆ ಸ್ವೀಕರಿಸಲಾಗುವುದು. ಅಂತಿಮವಾಗಿ ಕ್ಷೇತ್ರ ಪುನರ್ವಿಂಗಡಣಾ ಆಯೋಗವೇ ಆಕ್ಷೇಪಣೆ ಸ್ವೀಕರಿಸಿ, ವಿಲೇವಾರಿ ಮಾಡುವ ವ್ಯವಸ್ಥೆ ಬರಲಿದೆ ಎಂದರು.</p>.<p><strong>ಚುನಾವಣೆ ಮುಂದೂಡಿಕೆ ಸಾಧ್ಯತೆ: </strong>ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಪ್ರತ್ಯೇಕ ಆಯೋಗ ರಚನೆ ಕುರಿತು ನ್ಯಾಯಾಲಯಕ್ಜೆ ಸೋಮವಾರ ಮಾಹಿತಿ ನೀಡಲಿರುವ ಸರ್ಕಾರ, ಹೊಸದಾಗಿ ಕ್ಷೇತ್ರ ಪುನರ್ವಿಂಗಡಣೆಗೆ ಅವಕಾಶ ಕೋರುವ ಸಾಧ್ಯತೆ ಇದೆ.</p>.<p>ಹೈಕೋರ್ಟ್ ಒಪ್ಪಿದರೆ, ಹೊಸದಾಗಿ ರಚನೆಯಾಗಲಿರುವ ಆಯೋಗ ಮತ್ತೊಮ್ಮೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣಾ ಪ್ರಕ್ರಿಯೆ ನಡೆಸಲಿದೆ. ಬಳಿಕ ಮೀಸಲಾತಿ ನಿಗದಿಯಾಗಿ, ಚುನಾವಣೆ ನಡೆಸಬೇಕು. ಈ ಎಲ್ಲ ಪ್ರಕ್ರಿಯೆಗಳನ್ನು ನಡೆಸುವುದಕ್ಕಾಗಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣೆಗಾಗಿ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಪ್ರತ್ಯೇಕ ಕ್ಷೇತ್ರ ಪುನರ್ವಿಂಗಡಣಾ ಆಯೋಗ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತ್ಯೇಕ ಆಯೋಗ ರಚನೆಗೆ ಪೂರಕವಾಗಿ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಸಭೆಯ ಬಳಿಕ ವಿವರ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, 'ಕಾನೂನಿನ ಪ್ರಕಾರ ರಾಜ್ಯ ಚುನಾವಣಾ ಆಯೋಗವೇ ಕ್ಷೇತ್ರ ಪುನರ್ವಿಂಗಡಣೆ ಮಾಡಲು ಅವಕಾಶವಿಲ್ಲ. ಕಳೆದ ಬಾರಿ ತಪ್ಪಾಗಿ ಆ ರೀತಿ ಪ್ರಕ್ರಿಯೆ ನಡೆಸಲಾಗಿದೆ. ಇದರಿಂದ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡೆಯಲ್ಲಿ ತಪ್ಪುಗಳಾಗಿವೆ ಎಂದು ಆರೋಪಿಸಿ ಹೈಕೋರ್ಟ್ಗೆ 2,000 ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಸಮಸ್ಯೆ ತಪ್ಪಿಸಲು ಪ್ರತ್ಯೇಕ ಆಯೋಗ ರಚನೆಗೆ ತೀರ್ಮಾನಿಸಲಾಯಿತು' ಎಂದರು.</p>.<p>ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಕ್ಷೇತ್ರ ಪುನರ್ವಿಂಗಡಣಾ ಆಯೋಗದಲ್ಲಿ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸದಸ್ಯರಾಗಲಿದ್ದು, ಆಯುಕ್ತರು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಅಗತ್ಯ ಇರುವ ಎಲ್ಲ ಸಂದರ್ಭಗಳಲ್ಲಿ ಸೀಮಿತ ಕಾಲಾವಧಿಗೆ ಆಯೋಗವನ್ನು ನೇಮಿಸಲಾಗುವುದು ಎಂದು ವಿವರಿಸಿದರು.</p>.<p>ಪ್ರತ್ಯೇಕ ಆಯೋಗ ಸಿದ್ಧಪಡಿಸುವ ಕ್ಷೇತ್ರ ಪುನರ್ವಿಂಗಡಣಾ ವರದಿಗಳಿಗೆ ಎರಡು ಹಂತಗಳಲ್ಲಿ ಸಲಹೆ, ಆಕ್ಷೇಪಣೆ ಸ್ವೀಕರಿಸಿ, ಇತ್ಯರ್ಥಪಡಿಸಲಾಗುವುದು. ಮೊದಲು ಜಿಲ್ಲಾಧಿಕಾರಿ ಹಂತದಲ್ಲಿ ಆಕ್ಷೇಪಣೆ ಸ್ವೀಕರಿಸಲಾಗುವುದು. ಅಂತಿಮವಾಗಿ ಕ್ಷೇತ್ರ ಪುನರ್ವಿಂಗಡಣಾ ಆಯೋಗವೇ ಆಕ್ಷೇಪಣೆ ಸ್ವೀಕರಿಸಿ, ವಿಲೇವಾರಿ ಮಾಡುವ ವ್ಯವಸ್ಥೆ ಬರಲಿದೆ ಎಂದರು.</p>.<p><strong>ಚುನಾವಣೆ ಮುಂದೂಡಿಕೆ ಸಾಧ್ಯತೆ: </strong>ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಪ್ರತ್ಯೇಕ ಆಯೋಗ ರಚನೆ ಕುರಿತು ನ್ಯಾಯಾಲಯಕ್ಜೆ ಸೋಮವಾರ ಮಾಹಿತಿ ನೀಡಲಿರುವ ಸರ್ಕಾರ, ಹೊಸದಾಗಿ ಕ್ಷೇತ್ರ ಪುನರ್ವಿಂಗಡಣೆಗೆ ಅವಕಾಶ ಕೋರುವ ಸಾಧ್ಯತೆ ಇದೆ.</p>.<p>ಹೈಕೋರ್ಟ್ ಒಪ್ಪಿದರೆ, ಹೊಸದಾಗಿ ರಚನೆಯಾಗಲಿರುವ ಆಯೋಗ ಮತ್ತೊಮ್ಮೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣಾ ಪ್ರಕ್ರಿಯೆ ನಡೆಸಲಿದೆ. ಬಳಿಕ ಮೀಸಲಾತಿ ನಿಗದಿಯಾಗಿ, ಚುನಾವಣೆ ನಡೆಸಬೇಕು. ಈ ಎಲ್ಲ ಪ್ರಕ್ರಿಯೆಗಳನ್ನು ನಡೆಸುವುದಕ್ಕಾಗಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>