<p><strong>ಮಂಡ್ಯ:</strong> ‘ಕೆಆರ್ಎಸ್ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಪಾಂಡವಪುರ ತಾಲ್ಲೂಕು ಬೇಬಿಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸೋಮವಾರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜಲಾಶಯದ ಸುತ್ತಮತ್ತ ಗಣಿಗಾರಿಕೆ ನಿಷೇಧಿಸಲು ಅವಕಾಶವಿದೆ, ದೇಶದ ವಿವಿಧೆಡೆ ಅಣೆಕಟ್ಟೆಗಳ ಸುತ್ತ ಗಣಿಗಾರಿಕೆ ನಿಲ್ಲಿಸಿದ ಸಾಕಷ್ಟು ಉದಾಹರಣೆಗಳಿವೆ. ಅಗತ್ಯಬಿದ್ದರೆ ಬೇಬಿಬೆಟ್ಟದಲ್ಲಿ ಕಾನೂನಾತ್ಮಕವಾಗಿ ಅನುಮತಿ ಪಡೆದು ಚಟುವಟಿಕೆ ನಡೆಸುತ್ತಿರುವ ಮಾಲೀಕರಿಗೆ ಪರ್ಯಾಯವಾಗಿ ಬೇರೆ ಜಾಗ ನೀಡಲಾಗುವುದು’ ಎಂದರು.</p>.<p>‘ಜಲಾಶಯದ ಸುತ್ತಮುತ್ತಲಿನ ಗಣಿಗಾರಿಕೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದರಿಂದ ಜಲಾಶಯಕ್ಕೆ ಧಕ್ಕೆ ಎಂಬ ಉಂಟಾಗಲಿದೆ ಮಾಹಿತಿಯೂ ಇದೆ. ಶಾಶ್ವತವಾಗಿ ಗಣಿ ಚಟುವಟಿಕೆ ಸ್ಥಗಿತಗೊಳಿಸಬೇಕು ಎಂಬ ಕೂಗಿದೆ. ಇದನ್ನು ಪರಿಗಣಿಸಿ ನಿಷೇಧಕ್ಕೆ ತೀರ್ಮಾನಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಕೆಆರ್ಎಸ್ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಪಾಂಡವಪುರ ತಾಲ್ಲೂಕು ಬೇಬಿಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸೋಮವಾರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜಲಾಶಯದ ಸುತ್ತಮತ್ತ ಗಣಿಗಾರಿಕೆ ನಿಷೇಧಿಸಲು ಅವಕಾಶವಿದೆ, ದೇಶದ ವಿವಿಧೆಡೆ ಅಣೆಕಟ್ಟೆಗಳ ಸುತ್ತ ಗಣಿಗಾರಿಕೆ ನಿಲ್ಲಿಸಿದ ಸಾಕಷ್ಟು ಉದಾಹರಣೆಗಳಿವೆ. ಅಗತ್ಯಬಿದ್ದರೆ ಬೇಬಿಬೆಟ್ಟದಲ್ಲಿ ಕಾನೂನಾತ್ಮಕವಾಗಿ ಅನುಮತಿ ಪಡೆದು ಚಟುವಟಿಕೆ ನಡೆಸುತ್ತಿರುವ ಮಾಲೀಕರಿಗೆ ಪರ್ಯಾಯವಾಗಿ ಬೇರೆ ಜಾಗ ನೀಡಲಾಗುವುದು’ ಎಂದರು.</p>.<p>‘ಜಲಾಶಯದ ಸುತ್ತಮುತ್ತಲಿನ ಗಣಿಗಾರಿಕೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದರಿಂದ ಜಲಾಶಯಕ್ಕೆ ಧಕ್ಕೆ ಎಂಬ ಉಂಟಾಗಲಿದೆ ಮಾಹಿತಿಯೂ ಇದೆ. ಶಾಶ್ವತವಾಗಿ ಗಣಿ ಚಟುವಟಿಕೆ ಸ್ಥಗಿತಗೊಳಿಸಬೇಕು ಎಂಬ ಕೂಗಿದೆ. ಇದನ್ನು ಪರಿಗಣಿಸಿ ನಿಷೇಧಕ್ಕೆ ತೀರ್ಮಾನಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>