ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜಲಾಶಯದ ಸುತ್ತಮತ್ತ ಗಣಿಗಾರಿಕೆ ನಿಷೇಧಿಸಲು ಅವಕಾಶವಿದೆ, ದೇಶದ ವಿವಿಧೆಡೆ ಅಣೆಕಟ್ಟೆಗಳ ಸುತ್ತ ಗಣಿಗಾರಿಕೆ ನಿಲ್ಲಿಸಿದ ಸಾಕಷ್ಟು ಉದಾಹರಣೆಗಳಿವೆ. ಅಗತ್ಯಬಿದ್ದರೆ ಬೇಬಿಬೆಟ್ಟದಲ್ಲಿ ಕಾನೂನಾತ್ಮಕವಾಗಿ ಅನುಮತಿ ಪಡೆದು ಚಟುವಟಿಕೆ ನಡೆಸುತ್ತಿರುವ ಮಾಲೀಕರಿಗೆ ಪರ್ಯಾಯವಾಗಿ ಬೇರೆ ಜಾಗ ನೀಡಲಾಗುವುದು’ ಎಂದರು.