<p><strong>ಬೆಂಗಳೂರು</strong>: ‘ಯುವತಿಯನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ಭರವಸೆ ನೀಡಿ ನಂತರ ಆ ಭರವಸೆ ನಿರಾಕರಿಸುವುದು ಭಾರತೀಯ ದಂಡ ಸಂಹಿತೆ–1860 (ಐಪಿಸಿ) ಕಲಂ 420ರ ಅಡಿಯಲ್ಲಿ ವಂಚನೆಯಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>‘ನನ್ನ ವಿರುದ್ಧ ಯುವತಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಕೆ.ಆರ್ ಪುರ ನಿವಾಸಿ ವೆಂಕಟೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.</p>.<p>‘ಮದುವೆಯ ಭರವಸೆ ಮುರಿಯುವುದನ್ನು ಐಪಿಸಿ ಕಲಂ 415ರ ಅನುಸಾರ ವಂಚನೆ ವ್ಯಾಖ್ಯಾನದ ವ್ಯಾಪ್ತಿಗೆ ಸೇರಿಸಲಾಗದು. ಮೋಸ ಮಾಡುವ ಉದ್ದೇಶದಿಂದಲೇ ಒಪ್ಪಂದ ಮಾಡಿಕೊಂಡು ಬಳಿಕ ಅದನ್ನು ಉಲ್ಲಂಘಿಸಿದಾಗ ಮಾತ್ರ ಕ್ರಿಮಿನಲ್ ಪ್ರಕರಣ ದಾಖಲಿಸಬಹುದು’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಅರ್ಜಿದಾರ ವ್ಯಕ್ತಿ ಮೋಸ ಮಾಡುವ ಉದ್ದೇಶದಿಂದಲೇ ಈ ರೀತಿ ವಂಚಿಸಿದ್ದಾನೆ ಎಂಬುದನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡುವಲ್ಲಿ ಯುವತಿ ವಿಫಲವಾಗಿದ್ದಾರೆ’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಫ್ಐಆರ್ ರದ್ದುಪಡಿಸಿದೆ.</p>.<p><a href="https://www.prajavani.net/karnataka-news/karnataka-sslc-exam-2022-timetable-schedule-released-by-govt-905036.html" itemprop="url">ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 28ರಿಂದ ಏ. 11ರವರೆಗೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಯುವತಿಯನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ಭರವಸೆ ನೀಡಿ ನಂತರ ಆ ಭರವಸೆ ನಿರಾಕರಿಸುವುದು ಭಾರತೀಯ ದಂಡ ಸಂಹಿತೆ–1860 (ಐಪಿಸಿ) ಕಲಂ 420ರ ಅಡಿಯಲ್ಲಿ ವಂಚನೆಯಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>‘ನನ್ನ ವಿರುದ್ಧ ಯುವತಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಕೆ.ಆರ್ ಪುರ ನಿವಾಸಿ ವೆಂಕಟೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.</p>.<p>‘ಮದುವೆಯ ಭರವಸೆ ಮುರಿಯುವುದನ್ನು ಐಪಿಸಿ ಕಲಂ 415ರ ಅನುಸಾರ ವಂಚನೆ ವ್ಯಾಖ್ಯಾನದ ವ್ಯಾಪ್ತಿಗೆ ಸೇರಿಸಲಾಗದು. ಮೋಸ ಮಾಡುವ ಉದ್ದೇಶದಿಂದಲೇ ಒಪ್ಪಂದ ಮಾಡಿಕೊಂಡು ಬಳಿಕ ಅದನ್ನು ಉಲ್ಲಂಘಿಸಿದಾಗ ಮಾತ್ರ ಕ್ರಿಮಿನಲ್ ಪ್ರಕರಣ ದಾಖಲಿಸಬಹುದು’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಅರ್ಜಿದಾರ ವ್ಯಕ್ತಿ ಮೋಸ ಮಾಡುವ ಉದ್ದೇಶದಿಂದಲೇ ಈ ರೀತಿ ವಂಚಿಸಿದ್ದಾನೆ ಎಂಬುದನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡುವಲ್ಲಿ ಯುವತಿ ವಿಫಲವಾಗಿದ್ದಾರೆ’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಫ್ಐಆರ್ ರದ್ದುಪಡಿಸಿದೆ.</p>.<p><a href="https://www.prajavani.net/karnataka-news/karnataka-sslc-exam-2022-timetable-schedule-released-by-govt-905036.html" itemprop="url">ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 28ರಿಂದ ಏ. 11ರವರೆಗೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>