ಮೀಸಲಿಟ್ಟ ಅರಣ್ಯ, ಸಂರಕ್ಷಿತ ಅರಣ್ಯಗಳು ಇವತ್ತಿನ ತೀರ್ಮಾನದ ವ್ಯಾಪ್ತಿಗೆ ಬರುವುದಿಲ್ಲ. ಅರಣ್ಯವೆಂದು ಪರಿಭಾವಿಸಿದ (ಡೀಮ್ಡ್ ಫಾರೆಸ್ಟ್) ಪ್ರದೇಶದಲ್ಲಿ ಕೃಷಿ ಚಟುವಟಿಕೆ, ಮನೆಗಳನ್ನು ಕಟ್ಟಿಕೊಂಡಿರುವ ಪ್ರದೇಶಕ್ಕೆ ಮಾತ್ರ ಅನ್ವಯವಾಗುತ್ತದೆ. ಈಗಾಗಲೇ ಬಗರ್ ಹುಕುಂ ಜಮೀನು ಸಕ್ರಮಗೊಳಿಸುವ ನಿಟ್ಟಿನಲ್ಲಿ 94 ಸಿ ಅಡಿ ಸಾವಿರಾರು ಜನ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅವರಿಗೆ ಭೂಮಿ ಹಂಚಲು ಈ ನಿರ್ಣಯದಿಂದ ಅನುಕೂಲವಾಗುತ್ತದೆ. ಹಲವು ದಶಕಗಳ ಸಮಸ್ಯೆಗೆ ಮುಕ್ತಿ ಸಿಕ್ಕಿದಂತೆ ಆಗುತ್ತದೆ ಎಂದು ಅಶೋಕ ಹೇಳಿದರು.