ನ.23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ಮೈಸೂರಿನ ಡಾ. ಎಚ್.ವಿ. ನಾಗರಾಜ್ ರಾವ್ ಅಧ್ಯಕ್ಷತೆ ವಹಿಸುವರು. ಸತ್ಯೇಶ್ ಎನ್. ಬೆಳ್ಳೂರ್, ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ, ಲೇಖಕಿ ಡಾ. ಗೀತಾವಸಂತ ಉಪನ್ಯಾಸ ನೀಡುವರು. ರಿಕಿ ಕೇಜ್ ಬಳಗದಿಂದ ಸಂಗೀತ, ನೃತ್ಯ ವೈವಿಧ್ಯ ನಡೆಯಲಿದೆ. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್ಆರ್ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.