<p><strong>ಬೆಂಗಳೂರು: </strong>ನ್ಯಾಯಾಂಗವನ್ನು ನಿಂದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರಹ ಪ್ರಕಟಿಸಿದ ಪ್ರಕರಣದಲ್ಲಿ ನಟ ಚೇತನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದೊಂದು ಅಪಹರಣವೆಂದು ಚೇತನ್ ಪತ್ನಿ ಮೇಘಾ ಆರೋಪಿಸಿದ್ದಾರೆ.</p>.<p>ಮಧ್ಯಾಹ್ನ 3 ಗಂಟೆಗೆ ಚೇತನ್ ಅವರನ್ನು ಮನೆಯಿಂದ ವಶಕ್ಕೆ ಪಡೆದಿರುವ ಪೊಲೀಸರು, ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ‘ಪತಿ ಎಲ್ಲಿದ್ದಾರೆ’ ಎಂಬುದನ್ನು ತಿಳಿಯಲು ಪತ್ನಿ ಮೇಘಾ, ಶೇಷಾದ್ರಿಪುರ ಠಾಣೆಗೆ ಬಂದಿದ್ದಾರೆ.</p>.<p>ಆದರೆ, ಚೇತನ್ ಶೇಷಾದ್ರಿಪುರ ಠಾಣೆಯಲ್ಲಿಲ್ಲ ಎಂಬ ಮಾಹಿತಿ ಮೇಘಾ ಅವರಿಗೆ ಗೊತ್ತಾಗಿದೆ. ಘಟನೆ ಬಗ್ಗೆ ವಿಡಿಯೊ ಹರಿಬಿಟ್ಟಿರುವ ಮೇಘನಾ, ‘ಪೊಲೀಸರೆಂದು ಹೇಳಿಕೊಂಡು ಮನೆಗೆ ಬಂದಿದ್ದ ಕೆಲವರು, ಚೇತನ್ ಅವರನ್ನು ಕರೆದೊಯ್ದಿದ್ದಾರೆ. ಅವರು ಈಗ ಎಲ್ಲಿದ್ದಾರೆಂಬುದನ್ನು ಯಾರೂ ಹೇಳುತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>‘ಚೇತನ್ ಹಾಗೂ ಅವರ ಅಂಗರಕ್ಷಕನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇದೊಂದು ಷಡ್ಯಂತ್ರದಂತೆ ಕಾಣುತ್ತಿದೆ’ ಎಂದೂ ದೂರಿದ್ದಾರೆ.</p>.<p>‘ಅಪರಾಧ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನೋಟಿಸ್ ಸಹ ಕೊಟ್ಟಿಲ್ಲ. ಇದೊಂದು ಅಕ್ರಮ ಬಂಧನವಾಗಿದೆ. ಇದರ ವಿರುದ್ಧ ಹೋರಾಡಲು ಜನರು ಬೆಂಬಲ ನೀಡಬೇಕು’ ಎಂದೂ ಕೋರಿದ್ದಾರೆ.</p>.<p>ಪೊಲೀಸ್ ಅಧಿಕಾರಿಯೊಬ್ಬರು, ‘ಅತ್ಯಾಚಾರ ಪ್ರಕರಣವೊಂದರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಮಂಜೂರು ಮಾಡಿದ್ದರು. ಇದೇ ವಿಷಯ ಪ್ರಸ್ತಾಪಿಸಿ ಚೇತನ್ ಅವರು ನ್ಯಾಯಾಂಗ ನಿಂದನೆ ಮಾಡಿರುವ ಆರೋಪವಿದೆ. ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನ್ಯಾಯಾಂಗವನ್ನು ನಿಂದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರಹ ಪ್ರಕಟಿಸಿದ ಪ್ರಕರಣದಲ್ಲಿ ನಟ ಚೇತನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದೊಂದು ಅಪಹರಣವೆಂದು ಚೇತನ್ ಪತ್ನಿ ಮೇಘಾ ಆರೋಪಿಸಿದ್ದಾರೆ.</p>.<p>ಮಧ್ಯಾಹ್ನ 3 ಗಂಟೆಗೆ ಚೇತನ್ ಅವರನ್ನು ಮನೆಯಿಂದ ವಶಕ್ಕೆ ಪಡೆದಿರುವ ಪೊಲೀಸರು, ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ‘ಪತಿ ಎಲ್ಲಿದ್ದಾರೆ’ ಎಂಬುದನ್ನು ತಿಳಿಯಲು ಪತ್ನಿ ಮೇಘಾ, ಶೇಷಾದ್ರಿಪುರ ಠಾಣೆಗೆ ಬಂದಿದ್ದಾರೆ.</p>.<p>ಆದರೆ, ಚೇತನ್ ಶೇಷಾದ್ರಿಪುರ ಠಾಣೆಯಲ್ಲಿಲ್ಲ ಎಂಬ ಮಾಹಿತಿ ಮೇಘಾ ಅವರಿಗೆ ಗೊತ್ತಾಗಿದೆ. ಘಟನೆ ಬಗ್ಗೆ ವಿಡಿಯೊ ಹರಿಬಿಟ್ಟಿರುವ ಮೇಘನಾ, ‘ಪೊಲೀಸರೆಂದು ಹೇಳಿಕೊಂಡು ಮನೆಗೆ ಬಂದಿದ್ದ ಕೆಲವರು, ಚೇತನ್ ಅವರನ್ನು ಕರೆದೊಯ್ದಿದ್ದಾರೆ. ಅವರು ಈಗ ಎಲ್ಲಿದ್ದಾರೆಂಬುದನ್ನು ಯಾರೂ ಹೇಳುತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>‘ಚೇತನ್ ಹಾಗೂ ಅವರ ಅಂಗರಕ್ಷಕನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇದೊಂದು ಷಡ್ಯಂತ್ರದಂತೆ ಕಾಣುತ್ತಿದೆ’ ಎಂದೂ ದೂರಿದ್ದಾರೆ.</p>.<p>‘ಅಪರಾಧ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನೋಟಿಸ್ ಸಹ ಕೊಟ್ಟಿಲ್ಲ. ಇದೊಂದು ಅಕ್ರಮ ಬಂಧನವಾಗಿದೆ. ಇದರ ವಿರುದ್ಧ ಹೋರಾಡಲು ಜನರು ಬೆಂಬಲ ನೀಡಬೇಕು’ ಎಂದೂ ಕೋರಿದ್ದಾರೆ.</p>.<p>ಪೊಲೀಸ್ ಅಧಿಕಾರಿಯೊಬ್ಬರು, ‘ಅತ್ಯಾಚಾರ ಪ್ರಕರಣವೊಂದರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಮಂಜೂರು ಮಾಡಿದ್ದರು. ಇದೇ ವಿಷಯ ಪ್ರಸ್ತಾಪಿಸಿ ಚೇತನ್ ಅವರು ನ್ಯಾಯಾಂಗ ನಿಂದನೆ ಮಾಡಿರುವ ಆರೋಪವಿದೆ. ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>