‘ರಾಜ್ಯದ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಮರಣ, ನಿವೃತ್ತಿ, ವರ್ಗಾವಣೆ ಹಾಗೂ ಇನ್ನಿತರೆ ಕಾರಣಗಳಿಂದ ತೆರವಾದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. 2017ರ ಜೂನ್ ನಂತರ ಆಯಾ ಕಾಲೇಜುಗಳು ಪಡೆದ ಅನುಮತಿ ಆಧಾರದ ಮೇಲೆ ನೇಮಕಾತಿಗೆ ಅವಕಾಶ ನೀಡಲಾಯಿತು. ಅಂದರೆ, ಅಂದಿನಿಂದಲೇ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ, ಈಗ ನೇಮಕಾತಿ ಆದೇಶ ಪತ್ರ ನೀಡದೆ ಕೋವಿಡ್ ನೆಪ ಹೇಳಲಾಗುತ್ತಿದೆ’ ಎಂದು ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಯೊಬ್ಬರು ಹೇಳಿದರು.