ಪ್ರಶ್ನೋತ್ತರ ಅವಧಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೆ.ಬಿ.ಅಶೋಕ್ ನಾಯ್ಕ್ ಈ ಬಗ್ಗೆ ಪ್ರಶ್ನೆ ಕೇಳಿದರು.
ಕಂದಾಯ ಗ್ರಾಮಗಳನ್ನಾಗಿ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ವಿವಿಧ ಹಂತದಲ್ಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಉತ್ತರಿಸಿದರು.
ಅಶೋಕ್ ನಾಯ್ಕ್, ’ರಾಜ್ಯದಲ್ಲಿ 57 ಸಾವಿರ ಜನವಸತಿ ಪ್ರದೇಶಗಳಿವೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ದಾಖಲೆಗಳಲ್ಲಿದೆ. 33 ಸಾವಿರ ಕಂದಾಯ ಗ್ರಾಮಗಳನ್ನು ಕಂದಾಯ ಇಲಾಖೆ ಘೋಷಣೆ ಮಾಡಿದೆ. ಉಳಿದ ಜನವಸತಿ ಪ್ರದೇಶಗಳನ್ನು ಸಹ ಕಂದಾಯ ಗ್ರಾಮಗಳಾಗಿ ಘೋಷಿಸಬೇಕು’ ಎಂದು ಆಗ್ರಹಿಸಿದರು.