ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರಕ್ಕೆ ನಿಯೋಗ: ರಮೇಶ ಜಾರಕಿಹೊಳಿ

ರಾಮನಗರ: ರಾಜ್ಯದ ಮಹಾತ್ಮಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಮೇಕೆದಾಟು ಅಣೆಕಟ್ಟೆ ನಿರ್ಮಾಣ ಸಂಬಂಧ ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಜೊತೆಗೂಡಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಕನಕಪುರ ತಾಲ್ಲೂಕಿನ ಸಂಗಮ-ಮೇಕೆದಾಟು ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಯೋಜನೆಗಾಗಿ 9 ಸಾವಿರ ಕೋಟಿ ವೆಚ್ಚದ ಡಿಪಿಆರ್ ಈಗಾಗಲೇ ಸಿದ್ಧವಾಗಿದೆ. ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಇದರ ಡಿಪಿಆರ್ ಸಿದ್ಧವಾಗಿದ್ದು, ನಂತರ ನನೆಗುದಿಗೆ ಬಿದ್ದಿತ್ತು. ಈಗ ಮತ್ತೊಮ್ಮೆ ಪರಿಷ್ಕೃತ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.
ಮುಂದಿನ ವರ್ಷ ತಮಿಳುನಾಡಿನಲ್ಲಿ ಚುನಾವಣೆ ಇದೆ. ಹೀಗಾಗಿ ನೆರೆಯ ರಾಜ್ಯದಿಂದ ಸಹಜವಾಗಿಯೇ ಇದಕ್ಕೆ ಅಡೆತಡೆ ಹೆಚ್ಚಿದೆ. ಅಗತ್ಯ ಬಿದ್ದರೆ ತಮಿಳುನಾಡು ಸರ್ಕಾರದ ಜೊತೆ ಮಾತುಕತೆ ನಡೆಸಲಾಗುವುದು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.