ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರನ್ನು ಪೊಲೀಸರು ತಳ್ಳಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾಂಗ್ರೆಸ್, ಅದಕ್ಕೆ ಸಂಬಂಧಿಸಿದ ವಿಡಿಯೊ ಟ್ವೀಟ್ ಮಾಡಿದ್ದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.