ವಿಷಯ ಪ್ರಸ್ತಾಪಿಸಿ ಮಾತನಾಡಿದ ಹರಿಪ್ರಸಾದ್, ‘ತುಳು ಮತ್ತು ಕೊಡವ ಭಾಷೆಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಎರಡೂ ಭಾಷೆಗಳನ್ನು ಲಕ್ಷಾಂತರ ಮಂದಿ ಬಳಕೆ ಮಾಡುತ್ತಾರೆ. ಈ ಭಾಷೆಗಳನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಿದರೆ ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ನೆರವಾಗುತ್ತದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು’ ಎಂದು ಆಗ್ರಹಿಸಿದರು.