ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ವಾಗ್ವಾದ ನಡೆದು, ತಳ್ಳಾಟ,ನೂಕಾಟ ಉಂಟಾಗಿತ್ತು. ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ನೇತೃತ್ವದಲ್ಲಿ ನೂರಾರು ಜನ ಜಿಲ್ಲಾಧಿಕಾರಿ ಕಚೇರಿ ಗೇಟ್ಗೆ ಬೀಗ ಜಡಿದು, ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಕೆಲವೆಡೆ ರಸ್ತೆ ತಡೆ ನಡೆಸಿದರು.