ಒಕ್ಕಲಿಗರ ಸಂಘದ ಆವರಣದಲ್ಲಿ ಈಚೆಗೆ ನಡೆದಿದ್ದ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕಲಿಗರ ಸಮುದಾಯದ
ಮೀಸಲಾತಿ ಪ್ರಮಾಣವನ್ನು (3ಎ) ಶೇ 4ರಿಂದ ಶೇ 12ಕ್ಕೆ ಹೆಚ್ಚಿಸುವಂತೆಆಗ್ರಹಿಸಲಾಗಿತ್ತು. ರಾಜ್ಯಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಇದುವರೆಗೂ ಮೀಸಲಾತಿ ಹೆಚ್ಚಿಸುವ ಕುರಿತು ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ. ಆದ್ದರಿಂದ,ಮುಂದಿನ ಹೋರಾಟ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.