‘ರಾಜ್ಯದಲ್ಲಿ 10 ಸಾವಿರ ಕೋಳಿ ಸಾಕಾಣಿಕೆದಾರ ರೈತರು ವಿವಿಧ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು ಮಾಂಸದ ಕೋಳಿಗಳನ್ನು (ಬ್ರಾಯಿಲರ್) ಸಾಕಾಣಿಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕುಕ್ಕುಟ ಕ್ಷೇತ್ರವೂ ವೇಗವಾಗಿ ಬೆಳೆಯುತ್ತಿದ್ದು, ಪ್ರತಿದಿನ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಯುತ್ತಿದೆ. ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಅವಕಾಶಗಳಿದ್ದರೂ ನಿರ್ಲಕ್ಷ್ಯ ವಹಿಸಿದೆ. ಇದರಿಂದ, ರೈತರಿಗೆ ಸಾಕಾಣಿಕೆ ದರ ನಿಗದಿ ಇತ್ಯಾದಿ ಸಮಸ್ಯೆಗಳಿಗೆ ಸರಿಯಾದ ಪರಿಹಾರ ಸಿಗುತ್ತಿಲ್ಲ’ ಎಂದು ಹೇಳಿದರು.