ಗಮನ ಸೆಳೆಯುವ ಸೂಚನೆ ಮಂಡಿಸಿದ ಬಿಜೆಪಿಯ ಕೆ.ಪಿ. ನಂಜುಂಡಿ, ‘ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಜನಗಣತಿ ಸಮೀಕ್ಷಾ ವರದಿ ಸಿದ್ಧವಾಗಿ ಎರಡು ವರ್ಷಗಳೇ ಆಗಿವೆ. ಹಿಂದುಳಿದವರು ಮಾತ್ರವಲ್ಲದೆ, ಮೇಲ್ವರ್ಗದವರೂ ಈಗ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಯಾವ ಸಮುದಾಯದವರು ಎಷ್ಟಿದ್ದಾರೆ, ಯಾರಿಗೆ ಮೀಸಲಾತಿ ಅವಶ್ಯಕತೆ ಇದೆ ಎಂಬುದು ಈ ವರದಿಯಿಂದ ಸ್ಪಷ್ಟವಾಗಲಿದ್ದು, ಅದನ್ನು ಬಿಡುಗಡೆ ಮಾಡುವುದು ಹೆಚ್ಚು ಪ್ರಸ್ತುತ’ ಎಂದರು.