ಈ ಸಂಬಂಧ ಅವರುಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ.ರಾಜ್ಯ ಸರ್ಕಾರಗಳು ಪದವಿ ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ನಡೆಸುತ್ತಿದೆ. ಈ ನೇಮಕಾತಿಗೆ ಅರ್ಹತೆ ಪಡೆಯಲು ಯುಜಿಸಿ ಸಂಸ್ಥೆಯು ನಡೆಸುವಎನ್.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅವಶ್ಯಕ. ಆದರೆ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಾದೇಶಿಕ ಭಾಷೆಯಲ್ಲಿ ಇರದ ಕಾರಣ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗುತ್ತಿಲ್ಲ. ಇದು ಸಂವಿಧಾನದ 14 ಮತ್ತು 15ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗಿದೆ’ ಎಂದು ತಿಳಿಸಿದ್ದಾರೆ.