ಸರಣಿ ಟ್ವೀಟ್ ಮಾಡಿರುವ ಅವರು, ‘ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳ ಪೈಕಿ, ಶೇ 20ರಷ್ಟು ಸರ್ಕಾರಿ ನೌಕರರು. ಅವರು ಕೊರೊನಾ ಸೇನಾನಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ಯಾರಿಗಾದರೂ ಸೋಂಕು ಇದ್ದರೆ ಉಳಿದವರಿಗೆ ಹರಡುವ ಸಾಧ್ಯತೆ ಇಲ್ಲವೇ. ಈ ಬಗ್ಗೆ ಮುಖ್ಯಮಂತ್ರಿ ತಕ್ಷಣ ಗಮನಹರಿಸಿ, ಪರೀಕ್ಷೆ ಮುಂದೂಡಬೇಕು’ ಎಂದೂ ಆಗ್ರಹಿಸಿದ್ದಾರೆ.