<p><strong>ಬೆಂಗಳೂರು:</strong> ಗ್ರೇಡ್–1 ಮತ್ತು ಗ್ರೇಡ್–2 ತಹಶೀಲ್ದಾರ್ ಹುದ್ದೆಗಳಿಗೆ ಬೇರೆ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸುವುದನ್ನು ನಿರ್ಬಂಧಿಸಿ ರಾಜ್ಯ ನಾಗರಿಕ ಸೇವಾ ನಿಯಮಗಳು ಮತ್ತು ರಾಜ್ಯ ಸಿವಿಲ್ ಸೇವಾ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಜಾರಿಗೊಳಿಸಿ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ.</p>.<p>ಕಂದಾಯ ಇಲಾಖೆಯ ಗ್ರೇಡ್– 1 ಮತ್ತು ಗ್ರೇಡ್–2 ತಹಶೀಲ್ದಾರ್ ಹುದ್ದೆಗಳಿಗೆ ಅನ್ಯ ಇಲಾಖೆಗಳ ಅಧಿಕಾರಿಗಳನ್ನು ಎರವಲು ಸೇವೆಯ ಆಧಾರದಲ್ಲಿ ನಿಯೋಜನೆ ಮಾಡಲಾಗುತ್ತಿತ್ತು. ಕಂದಾಯ ಇಲಾಖೆಯ ಅಧಿಕಾರಿಗಳನ್ನು ಮಾತ್ರವೇ ತಹಶೀಲ್ದಾರ್ ಹುದ್ದೆಗಳಿಗೆ ನಿಯೋಜಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು.</p>.<p>ಗ್ರೇಡ್–1 ಮತ್ತು ಗ್ರೇಡ್–2 ತಹಶೀಲ್ದಾರ್ ಹುದ್ದೆಗಳಿಗೆ ಇತರ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸುವುದನ್ನು ನಿರ್ಬಂಧಿಸಿ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿತ್ತು. ಮೇ 13ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಆಕ್ಷೇಪಣೆ, ಸಲಹೆಗಳನ್ನು ಇತ್ಯರ್ಥಪಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಶುಕ್ರವಾರ ಅಂತಿಮ ಅಧಿಸೂಚನೆ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರೇಡ್–1 ಮತ್ತು ಗ್ರೇಡ್–2 ತಹಶೀಲ್ದಾರ್ ಹುದ್ದೆಗಳಿಗೆ ಬೇರೆ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸುವುದನ್ನು ನಿರ್ಬಂಧಿಸಿ ರಾಜ್ಯ ನಾಗರಿಕ ಸೇವಾ ನಿಯಮಗಳು ಮತ್ತು ರಾಜ್ಯ ಸಿವಿಲ್ ಸೇವಾ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಜಾರಿಗೊಳಿಸಿ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ.</p>.<p>ಕಂದಾಯ ಇಲಾಖೆಯ ಗ್ರೇಡ್– 1 ಮತ್ತು ಗ್ರೇಡ್–2 ತಹಶೀಲ್ದಾರ್ ಹುದ್ದೆಗಳಿಗೆ ಅನ್ಯ ಇಲಾಖೆಗಳ ಅಧಿಕಾರಿಗಳನ್ನು ಎರವಲು ಸೇವೆಯ ಆಧಾರದಲ್ಲಿ ನಿಯೋಜನೆ ಮಾಡಲಾಗುತ್ತಿತ್ತು. ಕಂದಾಯ ಇಲಾಖೆಯ ಅಧಿಕಾರಿಗಳನ್ನು ಮಾತ್ರವೇ ತಹಶೀಲ್ದಾರ್ ಹುದ್ದೆಗಳಿಗೆ ನಿಯೋಜಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು.</p>.<p>ಗ್ರೇಡ್–1 ಮತ್ತು ಗ್ರೇಡ್–2 ತಹಶೀಲ್ದಾರ್ ಹುದ್ದೆಗಳಿಗೆ ಇತರ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸುವುದನ್ನು ನಿರ್ಬಂಧಿಸಿ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿತ್ತು. ಮೇ 13ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಆಕ್ಷೇಪಣೆ, ಸಲಹೆಗಳನ್ನು ಇತ್ಯರ್ಥಪಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಶುಕ್ರವಾರ ಅಂತಿಮ ಅಧಿಸೂಚನೆ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>