ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ಪ್ರಾಣೇಶ್ ಎರಡು ನಾಮಪತ್ರಗಳನ್ನು ಸಲ್ಲಿಸಿದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಜೀವರಾಜ್, ಆಯನೂರು ಮಂಜುನಾಥ್ ಸಮ್ಮುಖದಲ್ಲಿ ಒಮ್ಮೆ ನಾಮಪತ್ರ ಸಲ್ಲಿಸಿದರೆ, ಆ ನಂತರ ಕಂದಾಯ ಸಚಿವ ಆರ್. ಅಶೋಕ ಮತ್ತು ಜೆಡಿಎಸ್ನ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ಎರಡನೇ ಪ್ರತಿ ಸಲ್ಲಿಸಿದರು.