ವಿಚಾರಣೆ ನಡೆಸಿದ ನ್ಯಾಯಾಲಯ, ‘ಈ ಬಗ್ಗೆ ನಡೆದ ಘಟನೆಗೆ ಏನು ಕಾರಣ ಎಂದು ಗೂಗಲ್ ಸ್ಪಷ್ಟವಾಗಿ ನಮಗೆ ತಿಳಿಸಿದೆ. ಅಲ್ಲದೆ ಸಾರ್ವಜನಿಕವಾಗಿ ಕನ್ನಡಿಗರ ಕ್ಷಮೆ ಕೇಳಿದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಿದ್ದೇವೆ' ಎಂದು ಹೇಳಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತ್ತು.