ಪರ್ಯಾಯ ನಾಯಕರು ಇದ್ದಾರೆ: ‘ಬಿ.ಎಸ್.ಯಡಿಯೂರಪ್ಪ ಬಳಿಕ ಲಿಂಗಾಯತರಲ್ಲಿ ಪರ್ಯಾಯ ನಾಯಕರಿಲ್ಲ ಎಂಬುದು ಸುಳ್ಳು. ಯಡಿಯೂರಪ್ಪ ಬಲುದೊಡ್ಡ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಲಿಂಗಾಯತರಲ್ಲಿ ಎರಡನೇ ಹಂತದಲ್ಲಿ ಹಲವು ನಾಯಕರು ಇದ್ದಾರೆ. ನಮ್ಮ ಪಕ್ಷದಲ್ಲಿ ನಾನು, ಶರಣಪ್ರಕಾಶ ಪಾಟೀಲ, ಈಶ್ವರ್ ಖಂಡ್ರೆ ಇದ್ದೇವೆ. ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಯತ್ನಾಳ್, ವಿ.ಸೋಮಣ್ಣ ಸೇರಿದಂತೆ ಹಲವರು ಇದ್ದಾರೆ. ಸಮುದಾಯ ದೊಡ್ಡದಿದೆ’ ಎಂದರು.