ಪರಿಚಯ: ಉಡುಪಿ ಜಿಲ್ಲೆಯ ಕೋಟ ಬಳಿಯ ತೆಕ್ಕಟ್ಟೆಯಲ್ಲಿ ಜನಿಸಿದ ಅಣ್ಣಯ್ಯ ಕುಲಾಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿದ್ದು ಶಿಕ್ಷಣ ಪಡೆದಿದ್ದರು. ವೈದ್ಯಕೀಯ ಪದವಿಯ ಬಳಿಕ ಸಮಾಜಮುಖಿ, ಜಾತ್ಯತೀತ ಚಿಂತನೆಯಿಂದ ಬಡವರ, ನೊಂದವರ, ನಿರ್ಗತಿಕರಿಗೆ ವೈದ್ಯಕೀಯ ಸೇವೆ ನೀಡುವ ಮೂಲಕ ಉತ್ತಮ ವೈದ್ಯ, ಸಮಾಜ ವಿಜ್ಞಾನಿ ಎಂದು ಗುರುತಿಸಿಕೊಂಡಿದ್ದರು. ಸದ್ಯ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ಗೆ ಸಂಬಂಧಿಸಿದ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ.ಬಿ.ಸಿ. ರಾಯ್ ಜೀವಮಾನ ಸಾಧನೆ ಪ್ರಶಸ್ತಿ, ರಾಷ್ಟ್ರೀಯ ಐಎಂಎ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಬಂದಿವೆ.ಶಿವಮೊಗ್ಗ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಗುರುಲಿಂಗಯ್ಯ ಅವರ ಅಧ್ಯಕ್ಷತೆಯ ಸಮಿತಿ ಅಣ್ಣಯ್ಯ ಕುಲಾಲ್ ಅವರನ್ನು ಆಯ್ಕೆ ಮಾಡಿದೆ.