ಬೆಂಗಳೂರು: ‘ಕುಮಾರಸ್ವಾಮಿಯವರೇ ನಿಮಗೆ ಆರ್ಎಸ್ಎಸ್ ಬಗ್ಗೆಇನ್ನೂ ಅನುಮಾನಗಳಿದ್ದರೆ ನಿಮ್ಮ ತಂದೆ ದೇವೇಗೌಡರಲ್ಲಿ ಆ ಬಗ್ಗೆ ಕೇಳಿ. ದೇವೇಗೌಡರೇ ಆರ್ಎಸ್ಎಸ್ ಸಿದ್ಧಾಂತವನ್ನು ಒಪ್ಪಿಕೊಂಡಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಕುಮಾರಸ್ವಾಮಿ ಅವರಿಗೆ ಇನ್ನೂ ಸಂಘದ ಬಗ್ಗೆ ಅನುಮಾನಗಳಿದ್ದರೆ ನಿಮ್ಮ ತಂದೆ ದೇವೇಗೌಡರಲ್ಲಿ ಕೇಳಬೇಕು.
— C T Ravi 🇮🇳 ಸಿ ಟಿ ರವಿ (@CTRavi_BJP) October 7, 2021
ನೀವು ವಿರೋಧ ಪಕ್ಷದಲ್ಲಿರುವ ಕಾರಣ ರಾಜಕೀಯದ ಕನ್ನಡಕ ಹಾಕಿ ಆರ್ಎಸ್ಎಸ್ ಅನ್ನು ನೋಡಬೇಡಿ.
ಸಂಘ ಯಾರನ್ನೂ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿಲ್ಲ. ನಮ್ಮ ಸಿದ್ದಾಂತ ಒಪ್ಪಿದರೆ ಆರ್ಎಸ್ಎಸ್ ನಿಮ್ಮನ್ನು ಸ್ವಾಗತಿಸುತ್ತದೆ.
13/14
ಎಚ್.ಡಿ.ದೇವೇಗೌಡರು ಆರ್ಎಸ್ಎಸ್ ಅನ್ನು ಹೊಗಳಿರುವ ಪತ್ರಿಕೆಗಳ ಹೇಳಿಕೆಗಳನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ರವಿ, ‘ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಚಾಮುಂಡೇಶ್ವರಿ ಚುನಾವಣಾ ಪ್ರಚಾರದ ವೇಳೆ ನಿಮ್ಮ ತಂದೆ ದೇವೇಗೌಡರು ಆರ್ಎಸ್ಎಸ್ ಉತ್ತಮ ಸಂಘಟನೆ, 1977 ರಲ್ಲಿ ತುರ್ತುಪರಿಸ್ಥಿತಿಯಲ್ಲಿ ಬಂಧನಗೊಂಡ ಸಂದರ್ಭದಲ್ಲಿ ಎಲ್.ಕೆ.,ಆಡ್ವಾಣಿ ಮತ್ತಿತ್ತರರು ನಡೆದುಕೊಂಡ ರೀತಿ ಮೆಚ್ಚುಗೆಯಾಗಿತ್ತು. ಹೀಗಾಗಿ ನಾನು ಆರ್ಎಸ್ಎಸ್ ಹೊಗಳುತ್ತೇನೆ ಎಂದು ತಿಳಿಸಿದ್ದರು’ ಎಂದಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಮುಂಡೇಶ್ವರಿ ಚುನಾವಣಾ ಪ್ರಚಾರದ ವೇಳೆ ನಿಮ್ಮ ತಂದೆ ದೇವೇಗೌಡರು "ಆರ್ಎಸ್ಎಸ್ ಉತ್ತಮ ಸಂಘಟನೆ", 1975ರಲ್ಲಿ ತುರ್ತುಪರಿಸ್ಥಿತಿ ವೇಳೆ ನಾವೆಲ್ಲ ಬಂಧನವಾದಾಗ ಎಲ್.ಕೆ.ಅಡ್ವಾಣಿ ಮತ್ತಿತರರು ನಡೆದುಕೊಂಡ ರೀತಿ ನನಗೆ ಮೆಚ್ಚುಗೆಯಾಯಿತು. ಹೀಗಾಗಿ ಆರ್ಎಸ್ಎಸ್ ಹೊಗಳುತ್ತೇನೆ ಎಂದು ಹೇಳಿದ್ದರು.
— C T Ravi 🇮🇳 ಸಿ ಟಿ ರವಿ (@CTRavi_BJP) October 7, 2021
4/14 pic.twitter.com/TWqt6Qtqei
1977ರಲ್ಲಿ ಬೆಂಗಳೂರಿನಲ್ಲಿ ನಡೆದ ಸಂಘದ ಕಾರ್ಯಕ್ರಮದಲ್ಲಿ ಅಂದಿನ ಸರಸಂಘ ಚಾಲಕರಾದ ಬಾಳಾಸಾಹೇಬ್ ದೇವರಸ್, ಕೆ.ಎಸ್.ಹೆಗ್ಡೆ, ಡಾ.ಜಾನ್ ಜತೆಯಲ್ಲಿ ದೇವೇಗೌಡರು ಕುಳಿತ್ತಿದ್ದಾರೆ. ಅಂದರೆ ದೇವೇಗೌಡರಿಗೆ ಆರ್ಎಸ್ಎಸ್ ಸಿದ್ಧಾಂತದಲ್ಲಿ ನಂಬಿಕೆ ಇದೆ ಎಂದು ಅರ್ಥವಲ್ಲವೇ ಕುಮಾರಸ್ವಾಮಿಯವರೇ ಎಂದು 1977 ರ ಫೋಟೊವನ್ನೂ ಟ್ಯಾಗ್ ಮಾಡಿದ್ದಾರೆ.
1977ರಲ್ಲಿ ಬೆಂಗಳೂರಿನಲ್ಲಿ ನಡೆದ ಸಂಘದ ಕಾರ್ಯಕ್ರಮದಲ್ಲಿ ಅಂದಿನ ಸರಸಂಘಚಾಲಕರಾದ ಬಾಳಾಸಾಹೇಬ್ ದೇವರಸ್, ಕೆ.ಎಸ್. ಹೆಗ್ಡೆ, ಡಾ.ಜಾನ್ ಜೊತೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕುಳಿತಿದ್ದಾರೆ, ಫೋಟೋ ನೋಡಿ.
— C T Ravi 🇮🇳 ಸಿ ಟಿ ರವಿ (@CTRavi_BJP) October 7, 2021
ಅಂದರೆ ದೇವೇಗೌಡರಿಗೆ ಆರ್ಎಸ್ಎಸ್ ಸಿದ್ದಾಂತದಲ್ಲಿ ನಂಬಿಯಿದೆ ಎಂದು ಅರ್ಥವಲ್ಲವೇ ಕುಮಾರಸ್ವಾಮಿ ಅವರೇ?
3/14 pic.twitter.com/d6RStHrBbj
ದೇವೇಗೌಡರ ಪುತ್ರರಾಗಿ ಸಂಘದ ಸಿದ್ಧಾಂತಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರ ಅಪ್ರಬುದ್ಧತೆಗೆ ಸಾಕ್ಷಿ. ಭಾರತೀಯರನ್ನು ಭಾರತಕ್ಕಾಗಿ ಮಿಡಿಯುವಂತೆ ಮಾಡಬಲ್ಲ ಸಂಸ್ಥೆ ಆರ್ಎಸ್ಎಸ್ ಎಂದೇ ವಿಶ್ವ ಖ್ಯಾತಿ ಆಗಿದೆ. ಮನೆ ಮಠ, ಸ್ವಂತ ಬದುಕು ಬಿಟ್ಟು ಸಂಘ ಬಯಸುತ್ತಿರುವ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ದೊಡ್ಡ ತ್ಯಾಗಿಗಳ ದೊಡ್ಡ ಪಡೆಯೇ ಇಲ್ಲಿದೆ ಎಂದು ರವಿ ಹೇಳಿದ್ದಾರೆ.
ಸ್ವದೇಶಿ ವಸ್ತು ಬಳಕೆ ಬಗ್ಗೆ ಜಾಗೃತಿಗಾಗಿ ಜಾಗರಣಾ ಮಂಚ್, ರೈತಪರ ಹೋರಾಟಕ್ಕೆ ಭಾರತೀಯ ಕಿಸಾನ್ ಸಂಘ, ಕಾರ್ಮಿಕರ ಹೋರಾಟಕ್ಕೆ ಭಾರತೀಯ ಮಜ್ದೂರ್ ಸಂಘ, ಕಾಡು ಜನರ ಹಿತದೃಷ್ಟಿಯಿಂದ ವನ್ಯವಾಸಿ ಕಲ್ಯಾಣ ಆಶ್ರಮಗಳಿದ್ದು, ಬಡವರ ನೆರವಿಗೆ ಆರ್ಎಸ್ಎಸ್ ಬದ್ಧವಾಗಿದೆ.
— C T Ravi 🇮🇳 ಸಿ ಟಿ ರವಿ (@CTRavi_BJP) October 7, 2021
12/14
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.