ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಪೀಳಿಗೆಯಿಂದ ದೇವೇಗೌಡರ ವರ್ಚಸ್ಸಿಗೆ ಧಕ್ಕೆ: ಕೇಂದ್ರ ಸಚಿವ

Last Updated 8 ಜುಲೈ 2022, 1:42 IST
ಅಕ್ಷರ ಗಾತ್ರ

ಹಾಸನ: ‘ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರ ಬಗ್ಗೆ ಜನರಿಗೆ ವಿಶ್ವಾಸವಿದೆ. ಆದರೆ ಅವರಿಗೆ ವಯಸ್ಸಾಗಿದೆ. ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಆರೋಗ್ಯ ಸಹಕರಿಸುತ್ತಿಲ್ಲ’ ಎಂದು ಕೇಂದ್ರ ಇಂಧನ ಮತ್ತು ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಗುರ್ಜರ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಜೆಡಿಎಸ್ ಪ್ರಮುಖ ಪಕ್ಷ. ದೇವೇಗೌಡರು ಉತ್ತಮ ಆಡಳಿತ ನೀಡಿದ್ದಾರೆ. ಆದರೆ, ಅವರ ಮುಂದಿನ ಪೀಳಿಗೆಯವರು ಅವರ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ’ ಎಂದರು.

‘ದೇವೇಗೌಡರ ಬಗ್ಗೆ ಮಾತನಾಡುವುದಾದರೆ, ನಾನು ಹರಿಯಾಣ ಉದಾಹರಣೆ ತೆಗೆದುಕೊಳ್ಳುತ್ತೇನೆ. ದೇವಿಲಾಲ್ ಅವರ ಬಗ್ಗೆ ಜನರಲ್ಲಿ ವಿಶ್ವಾಸವಿತ್ತು. ಅವರ ಮುಂದಿನ ಪೀಳಿಗೆ ಆ ವಿಶ್ವಾಸ ಕಳೆದಕೊಂಡಿತು. ದೇವೇಗೌಡರ ವಿಷಯದಲ್ಲೂ ಅದೇ ಅಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT