ರಾಮನಗರದ ಗ್ರಾಮ ದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿಮಂಗಳವಾರ ಬೆಳಗ್ಗೆ 10.30ಕ್ಕೆ ಪೂಜೆ ಸಲ್ಲಿಸಿ ಗಂಗಾ ರಥಗಳಿಗೆ ಚಾಲನೆ ನೀಡಲಾಗುವುದು. ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸಿ.ಎಂ. ಇಬ್ರಾಹಿಂ ಸೇರಿದಂತೆ ಪಕ್ಷದ ಶಾಸಕರು, ಹಿರಿಯ ಮುಖಂಡರು ಭಾಗಿ ಆಗಲಿದ್ದಾರೆ ಎಂದುಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.