ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಆಸ್ಪತ್ರೆ ಬಳಿ ಜಮಾಯಿಸಿದ ಭಕ್ತ ಸಮೂಹ: ಬಿಗುವಿನ ವಾತಾವರಣ, ಶರಣರ ಪರ ಘೋಷಣೆ

Last Updated 2 ಸೆಪ್ಟೆಂಬರ್ 2022, 7:16 IST
ಅಕ್ಷರ ಗಾತ್ರ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧಿತರಾಗಿ‌‌ವ ಶಿವಮೂರ್ತಿ ಮುರುಘಾ ಶರಣರು ಚಿಕಿತ್ಸೆಗೆ ದಾಖಲಾಗಿರುವ ಜಿಲ್ಲಾ ಆಸ್ಪತ್ರೆ ಎದುರು ಭಕ್ತ ಸಮೂಹ ಜಮಾಯಿಸಿದೆ. ಶರಣರ ಪರವಾಗಿ ಘೋಷಣೆ ಮೊಳಗಿಸುತ್ತಿದ್ದಾರೆ.

ಶುಕ್ರವಾರ ನಸುಕಿನಲ್ಲಿ ಜಿಲ್ಲಾ ಕಾರಾಗೃಹ ಸೇರಿದ್ದ ಶರಣರ ಆರೋಗ್ಯದಲ್ಲಿ ಬೆಳಿಗ್ಗೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಅಪಾರ ಪ್ರಮಾಣದ ಭಕ್ತರು ಆಸ್ಪತ್ರೆಯ ಎದರು ಜಮಾಯಿಸಿದರು.

ಆರೋಗ್ಯ ಪರೀಕ್ಷೆ ನಡೆಸುತ್ತಿದ್ದ ಹೊರರೋಗಿ ವಿಭಾಗದ ಬಳಿ ಭಕ್ತರು ಜಮಾಯಿಸಿದರು. ಆಸ್ಪತ್ರೆಯ ಕಾಂಪೌಂಡ್, ಕಟ್ಟಡದ ಮೇಲೆ ನಿಂತು ಕುತೂಹಲ ಭರಿತರಾಗಿ ನೋಡುತ್ತಿದ್ದರು. ಶರಣರನ್ನು ತೀವ್ರ ನಿಘಾ ಘಟಕಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಏಕಾಏಕಿ ಜಮಾಯಿಸಿದರು. ಪೊಲೀಸರು ಗುಂಪು ಚದುರಿಸುವ ಮೂಲಕ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸ್ಥಳದಲ್ಲಿಯೇ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT