<p><strong>ಬೆಂಗಳೂರು: </strong>ಲಿಂಗಾಯತ ಪಂಚಮಸಾಲಿ ಮಹಾ ರ್ಯಾಲಿ ನಂತರವೂ, ,2ಎ ಮೀಸಲಾತಿ ನೀಡುವ ಕುರಿತು ಯಾವುದೇ ಕ್ರಮಕ್ಕೆ ರಾಜ್ಯಸರ್ಕಾರ ಮುಂದಾಗದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸಮುದಾಯದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ,<br />'ನಮ್ಮ ಜನಾಂಗದ ಮುಖ್ಯಮಂತ್ರಿಯವರು ನಮ್ಮ ಬೇಡಿಕೆಗೆ ಸ್ಪಂದಿಸುತ್ತಾರೆ ಎನ್ನುವ ಭರವಸೆ ಇತ್ತು. ಆದರೂ ಅವರಿಂದ ಯಾವುದೇ ಸ್ಪಂದನೆ ಸಿಗಲಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.<br />'ಸರ್ಕಾರದ ಪರವಾಗಿ ಸಚಿವ ಸಿ.ಸಿ.ಪಾಟೀಲ ಹಾಗೂ ನಿರಾಣಿ ಸಮಾವೇಶಕ್ಕೆ ಬಂದು ಮನ ಒಲಿಸುವ ಪ್ರಯತ್ನ ಮಾಡಿದರು. ಇದಕ್ಕೆ ನಾವು ಒಪ್ಪಿಲ್ಲ. ಸಮುದಾಯದ ಜನರೂ ಧರಣಿ ಮಾಡುವಂತೆ ಒತ್ತಾಯಿಸಿದ್ದರಿಂದ ಪ್ರತಿಭಟನೆ ಮುಂದುವರಿಸಿದ್ದೇವೆ' ಎಂದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/will-return-with-reservation-order-basava-jaya-mruthyunjaya-swamiji-panchamasali-807550.html"><strong>ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ</strong></a></p>.<p>'ಅನೇಕ ಸಮಾವೇಶಗಳು ಹೋರಾಟಗಳು ಬೆಂಗಳೂರಿಗೆ ಬಂದ ತಕ್ಷಣ ಅಂತ್ಯ ಆಗುವುದನ್ನು ನೋಡಿದ್ದೇವೆ. ಆದರೆ ನಮ್ಮ ಹೋರಾಟ ಕೇವಲ ಭರವಸೆಗೆ ಮುಕ್ತಾಯವಾಗುವುದಿಲ್ಲ. ಮೀಸಲಾತಿ ಆದೇಶ ಪಡೆದೇ ಪೀಠಕ್ಕೆ ಮರಳುತ್ತೇನೆ' ಎಂದರು.<br />ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಪಂಚಮಸಾಲಿ ಸಮುದಾಯದ ನೂರಾರು ಜನ ಪ್ರತಿಭಟನೆ ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲಿಂಗಾಯತ ಪಂಚಮಸಾಲಿ ಮಹಾ ರ್ಯಾಲಿ ನಂತರವೂ, ,2ಎ ಮೀಸಲಾತಿ ನೀಡುವ ಕುರಿತು ಯಾವುದೇ ಕ್ರಮಕ್ಕೆ ರಾಜ್ಯಸರ್ಕಾರ ಮುಂದಾಗದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸಮುದಾಯದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ,<br />'ನಮ್ಮ ಜನಾಂಗದ ಮುಖ್ಯಮಂತ್ರಿಯವರು ನಮ್ಮ ಬೇಡಿಕೆಗೆ ಸ್ಪಂದಿಸುತ್ತಾರೆ ಎನ್ನುವ ಭರವಸೆ ಇತ್ತು. ಆದರೂ ಅವರಿಂದ ಯಾವುದೇ ಸ್ಪಂದನೆ ಸಿಗಲಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.<br />'ಸರ್ಕಾರದ ಪರವಾಗಿ ಸಚಿವ ಸಿ.ಸಿ.ಪಾಟೀಲ ಹಾಗೂ ನಿರಾಣಿ ಸಮಾವೇಶಕ್ಕೆ ಬಂದು ಮನ ಒಲಿಸುವ ಪ್ರಯತ್ನ ಮಾಡಿದರು. ಇದಕ್ಕೆ ನಾವು ಒಪ್ಪಿಲ್ಲ. ಸಮುದಾಯದ ಜನರೂ ಧರಣಿ ಮಾಡುವಂತೆ ಒತ್ತಾಯಿಸಿದ್ದರಿಂದ ಪ್ರತಿಭಟನೆ ಮುಂದುವರಿಸಿದ್ದೇವೆ' ಎಂದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/will-return-with-reservation-order-basava-jaya-mruthyunjaya-swamiji-panchamasali-807550.html"><strong>ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ</strong></a></p>.<p>'ಅನೇಕ ಸಮಾವೇಶಗಳು ಹೋರಾಟಗಳು ಬೆಂಗಳೂರಿಗೆ ಬಂದ ತಕ್ಷಣ ಅಂತ್ಯ ಆಗುವುದನ್ನು ನೋಡಿದ್ದೇವೆ. ಆದರೆ ನಮ್ಮ ಹೋರಾಟ ಕೇವಲ ಭರವಸೆಗೆ ಮುಕ್ತಾಯವಾಗುವುದಿಲ್ಲ. ಮೀಸಲಾತಿ ಆದೇಶ ಪಡೆದೇ ಪೀಠಕ್ಕೆ ಮರಳುತ್ತೇನೆ' ಎಂದರು.<br />ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಪಂಚಮಸಾಲಿ ಸಮುದಾಯದ ನೂರಾರು ಜನ ಪ್ರತಿಭಟನೆ ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>