ಕಾನೂನು ಪದವಿ ಹಂತದಲ್ಲಿ ನಡೆಸುವ ಅಣಕು ನ್ಯಾಯಾಲಯದಲ್ಲಿ ಸತೀಶ ಅವರು ವಾದ ಮಂಡಿಸುತ್ತಿದ್ದ ರೀತಿ ಸಾಕಷ್ಟು ಪ್ರಸಿದ್ಧಿ ಪಡೆದಿತ್ತು. ಅಪರಾಧಶಾಸ್ತ್ರದಲ್ಲಿ ಪರಿಣತಿ ಹೊಂದಿರುವ ಅವರು ರಾಮ್ ಜೇಠ್ಮಲಾನಿ ಅವರ ಬಳಿ ಹತ್ತು ವರ್ಷ ಕೆಲಸ ಮಾಡಿ ಅನುಭವ ಪಡೆದರು. ನಂತರ ಪೂರ್ಣ ಪ್ರಮಾಣದಲ್ಲಿ ವಕೀಲರಾದ ಸತೀಶ್ ಅವರು ಶಸ್ತ್ರಾಸ್ತ್ರ ಪ್ರಕರಣದಲ್ಲಿ ಬಂಧಿತರಾಗಿದ್ದ ಸಂಜಯ ದತ್, ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಕಾರು ಓಡಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಲ್ಮಾನ್ ಖಾನ್ ಹಾಗೂ ನಟ ಸುಶಾಂತ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ರಿಯಾ ಚಕ್ರವರ್ತಿಗೆ ಜಾಮೀನು ಕೊಡಿಸಲು ಸತೀಶ್ ಅವರೇ ವಕಾಲತ್ತು ವಹಿಸಿದ್ದರು.