ಬೆಂಗಳೂರು:ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶಗೌಡ ಗೌಡರ ಹತ್ಯೆ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ, ಧಾರವಾಡದ ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಅವರ ಸಹೋದರ ವಿಜಯ್ ಅವರಿಗೆ ನೋಟಿಸ್ ನೀಡಿದೆ.
ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳು ಸಾಕಷ್ಟು ಮಾಹಿತಿ ಬಾಯ್ಬಿಟ್ಟಿದ್ದಾರೆ. ಅದರ ಅನ್ವಯ ಸಿಬಿಐ, ವಿಚಾರಣೆ ನಡೆಸುತ್ತಿದೆ. ಪ್ರಕರಣದ ವಿಚಾರಣೆಗಾಗಿ ಕಚೇರಿಗೆ ಬರುವಂತೆ ವಿಜಯ್ ಕುಲಕರ್ಣಿ ಅವರಿಗೆ ಸಿಬಿಐ ನೋಟಿಸ್ ನೀಡಿದೆ.
ನೋಟಿಸ್ ಪಡೆದಿರುವ ವಿಜಯ್, ನಗರದಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗಾಗಿ ಸೋಮವಾರ ಬೆಳಿಗ್ಗೆ ಹಾಜರಾಗಿದ್ದಾರೆ. ಸಿಬಿಐ ಅಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ.