ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಜಿ.ಪಂ. ಸದಸ್ಯನ ಹತ್ಯೆ; ಕಾಂಗ್ರೆಸ್ ಮುಖಂಡನ ಸಹೋದರನ ವಿಚಾರಣೆ

Last Updated 14 ಸೆಪ್ಟೆಂಬರ್ 2020, 6:45 IST
ಅಕ್ಷರ ಗಾತ್ರ

ಬೆಂಗಳೂರು:ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶಗೌಡ ಗೌಡರ ಹತ್ಯೆ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ, ಧಾರವಾಡದ ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಅವರ ಸಹೋದರ ವಿಜಯ್ ಅವರಿಗೆ ನೋಟಿಸ್ ನೀಡಿದೆ‌.

ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳು ಸಾಕಷ್ಟು ಮಾಹಿತಿ ಬಾಯ್ಬಿಟ್ಟಿದ್ದಾರೆ. ಅದರ ಅನ್ವಯ ಸಿಬಿಐ, ವಿಚಾರಣೆ ನಡೆಸುತ್ತಿದೆ. ಪ್ರಕರಣದ ವಿಚಾರಣೆಗಾಗಿ ಕಚೇರಿಗೆ ಬರುವಂತೆ ವಿಜಯ್ ಕುಲಕರ್ಣಿ ಅವರಿಗೆ ಸಿಬಿಐ ನೋಟಿಸ್ ನೀಡಿದೆ.

ನೋಟಿಸ್ ಪಡೆದಿರುವ ವಿಜಯ್, ನಗರದಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗಾಗಿ ಸೋಮವಾರ ಬೆಳಿಗ್ಗೆ ಹಾಜರಾಗಿದ್ದಾರೆ. ಸಿಬಿಐ ಅಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT