ಇಎಸ್ಐ, ಪಿಎಫ್ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಡಯಾಲಿಸಿಸ್ ಘಟಕದ ಸಿಬ್ಬಂದಿ ಕಳೆದ ಜೂನ್ ತಿಂಗಳಲ್ಲಿ ಸೇವೆ ಬಹಿಷ್ಕರಿಸಿ, ಬೆಂಗಳೂರಿನಲ್ಲಿ ಮುಷ್ಕರ ನಡೆಸಿದ್ದರು. ಆ ವೇಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಸಿಬ್ಬಂದಿ ಜತೆಗೆ ಸಭೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರಿಂದ ಮತ್ತೆ ಮುಷ್ಕರ ಕೈಗೊಳ್ಳಲು ನಿಬ್ಬಂದಿ ನಿರ್ಧರಿಸಿದ್ದಾರೆ.