‘ಒಂದು ಸಂಘಟನೆಯು ಈ ಹಿಂದೆ ಪ್ರತಿಭಟಿಸಿದಾಗ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ತಿಳಿಸಿದ್ದೆ. ಅಷ್ಟರಲ್ಲಿ ಮತ್ತೊಂದು ಸಂಘಟನೆ ಪ್ರತಿಭಟನೆ ಆರಂಭಿಸಿತು. ಸಚಿವನಾಗಿ ಹಣಕಾಸಿನ ಎಲ್ಲಾ ಬೇಡಿಕೆಗಳನ್ನು ನಾನೊಬ್ಬನೇ ಈಡೇರಿಸಲು ಆಗದು. ಇದನ್ನು ಬಜೆಟ್ಗೂ ಮುನ್ನ ಸಿ.ಎಂ ಜೊತೆ ಚರ್ಚಿಸುವೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು. ‘ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ನಮ್ಮ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸಲಿದೆ’ ಎಂದರು.