ಬಿಜೆಪಿ, ಕಾಂಗ್ರೆಸ್, ಸಿಪಿಐ(ಎಂ), ಜೆಡಿಎಸ್, ಕನ್ನಡ ಚಳವಳಿ ವಾಟಾಳ್ ಪಕ್ಷಗಳನ್ನು ಪ್ರತಿವಾದಿಗಳನ್ನು ಮಾಡಿರುವ ಪೀಠ, ‘ಈ ಹಿಂದೆ ನಡೆದಿರುವ ರ್ಯಾಲಿಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಅವರ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳು ತಡವಾಗಿ ಕ್ರಮ ಕೈಗೊಂಡಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.