ಒಕ್ಕಲಿಗ ಸಮುದಾಯದ ಸಭೆಯಲ್ಲಿ ಮಾತನಾಡಿದ ಶಿವಕುಮಾರ್, ‘ಇವತ್ತು ನಮಗೆ ಒಂದು ಅವಕಾಶ ಸಿಕ್ಕಿದೆ. ಇಂದು ನಮ್ಮ ಮನೆ ಬಾಗಿಲಿಗೆ ಬೆಳಕು ಹರಿದು ಬಂದಿದೆ. ಅದನ್ನು ನೀವು ರಾಜಕೀಯವಾಗಿ ಬಳಸಿಕೊಳ್ಳಬೇಕು. ನಿಮ್ಮ ಸ್ಫೂರ್ತಿ, ಆತ್ಮವಿಶ್ವಾಸ ನೋಡುತ್ತಿದ್ದರೆ ವಿಧಾನಸೌಧದಲ್ಲಿ ಕುಳ್ಳಿರಿಸುವ ರೀತಿ ಇದೆ. ಏನು ಮಾಡುತ್ತೀರೋ ಗೊತ್ತಿಲ್ಲ, ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ, ಕಳೆದುಕೊಳ್ಳಬೇಡಿ’ ಎಂದಿದ್ದಾರೆ. ಆ ಮೂಲಕ, ಬೆನ್ನಿಗೆ ನಿಂತು ಸಿ.ಎಂ ಮಾಡಿ ಎಂದು ಪರೋಕ್ಷವಾಗಿ ಕೋರಿದ್ದಾರೆ.