ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು,ಬಿಬಿಎಂಪಿ ಚುನಾವಣೆಗೆ ತಯಾರಿ, ಬೆಲೆ ಏರಿಕೆ ವಿರುದ್ಧ ಪಕ್ಷದಿಂದ ಪ್ರತಿಭಟನೆ ಕುರಿತಂತೆ ಹಲವು ವಿಷಯಗಳ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಬೆಂಗಳೂರು ನಗರದ ಶಾಸಕರು ಭಾನುವಾರ ಸಭೆ ನಡೆಸಿದರು.