ಅದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಸ್ವಾಮಿ ಯಾವ ಪಕ್ಷದಲ್ಲಿ ಇರುತ್ತಾರೋ ಆ ಪಕ್ಷವನ್ನು ಟೀಕಿಸಲು ಹಿಂಜರಿಯವುದಿಲ್ಲ. ಜನತಾ ಪಕ್ಷ, ಜನತಾದಳದಲ್ಲಿ ಇದ್ದಾಗ ಆ ಪಕ್ಷಗಳನ್ನೇ ಟೀಕಿಸಿದ್ದರು. ಪ್ರಧಾನಿ ಚಂದ್ರಶೇಖರ್ ಅವರ ಮಂತ್ರಿ ಮಂಡಲದಲ್ಲಿ ಇದ್ದಾಗ ಪ್ರಧಾನಿಯನ್ನೇ ಟೀಕಿಸಿದ್ದರು. ಅವರ ಬಗ್ಗೆ ನಿಮಗೂ ಚೆನ್ನಾಗಿ ಗೊತ್ತು ನನಗೂ ಗೊತ್ತಿದೆ’ ಎಂದರು.