ಕರ್ನಾಟಕದ ಪ್ರಭಾರಿಯಾಗಿ ಇದೇ ಮೊದಲಿಗೆ ಭೇಟಿ ನೀಡಿದ್ದೇನೆ. ಈ ರಾಜ್ಯದ ಪಕ್ಷದ ಉಸ್ತುವಾರಿ ಆಗಿರುವುದು ನನ್ನ ಸೌಭಾಗ್ಯ. ಪಕ್ಷ ಬಲವರ್ಧನೆ, ರೈತರಿಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಡಿರುವ ಯೋಜನೆಗಳನ್ನು ತಿಳಿಸಿ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಸದೃಢಗೊಳಿಸಲಾಗುವುದು. ಇದಕ್ಕಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದರು.